ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ರಾಜ್ಯದಲ್ಲಿ ಸಾವಿನ ಸಂಖ್ಯೆ ಇಳಿಕೆ

Last Updated 22 ನವೆಂಬರ್ 2020, 16:52 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೊಸ ಕೋವಿಡ್‌ ಪ್ರಕರಣಗಳ ಜತೆಗೆ ಮೃತಪಟ್ಟವರ ಸಂಖ್ಯೆಯೂ ಇಳಿಮುಖ ಕಂಡಿದ್ದು, ಭಾನುವಾರ ಒಟ್ಟು 13 ಮಂದಿ ಸಾವಿಗೀಡಾಗಿರುವುದು ದೃಢಪಟ್ಟಿದೆ.

ಕಳೆದ ತಿಂಗಳು ರಾಜ್ಯದಲ್ಲಿ 2,328 ಮಂದಿ ಮೃತಪಟ್ಟಿದ್ದರು. ಈ ತಿಂಗಳು 22 ದಿನಗಳ ಅವಧಿಯಲ್ಲಿ 486 ಮಂದಿ ಸಾವಿಗೀಡಾಗಿದ್ದು, ಪ್ರತಿ ನಿತ್ಯ ಸರಾಸರಿ 22 ಮಂದಿ ಮರಣ ಹೊಂದಿದ್ದಾರೆ. ಇಷ್ಟಾಗಿಯೂ ಕೋವಿಡ್‌ಗೆ ಈವರೆಗೆ ಮೃತಪಟ್ಟವರ ಸಂಖ್ಯೆ 11,654ಕ್ಕೆ ತಲುಪಿದೆ.ರಾಜ್ಯದಲ್ಲಿ ಮತ್ತೆ 1,704 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಸೋಂಕಿಗೀಡಾದವರ ಒಟ್ಟು ಸಂಖ್ಯೆ 8.73 ಲಕ್ಷಕ್ಕೆ ಏರಿಕೆಯಾಗಿದೆ. ಈ ತಿಂಗಳು49,634 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ.

ಬೆಂಗಳೂರಿನಲ್ಲಿ 669 ಮಂದಿ ಸೇರಿದಂತೆ ರಾಜ್ಯದಲ್ಲಿ 1,537 ಮಂದಿಗೆ ಕಾಯಿಲೆ ವಾಸಿಯಾಗಿದೆ. ಇದರಿಂದಾಗಿ ಗುಣಮುಖರ ಸಂಖ್ಯೆ 8.36 ಲಕ್ಷಕ್ಕೆ ತಲುಪಿದೆ. 24,868 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಇವರಲ್ಲಿ 470 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ಕಳೆದ 14 ದಿನಗಳ ಅವಧಿಯಲ್ಲಿ 1.41 ಲಕ್ಷ ನೇರ ಸಂಪರ್ಕಿತರು ಹಾಗೂ 1.56 ಲಕ್ಷ ಪರೋಕ್ಷ ಸಂಪರ್ಕಿತರನ್ನು ಪತ್ತೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 1,039 ಮಂದಿ ಕೋವಿಡ್ ಪೀಡಿತರಾಗಿದ್ದು, ಸೋಂಕಿತರ ಸಂಖ್ಯೆ 3.63 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT