ಬೆಂಗಳೂರು: ದೇಶದಾದ್ಯಂತ ಕೋವಿಡ್ 3ನೇ ಅಲೆಯ ಭೀತಿ ವ್ಯಾಪಿಸಿರುವ ನಡುವೆಯೇ ರಾಜ್ಯದಲ್ಲಿ ಶನಿವಾರ 1,987 ಪ್ರಕರಣಗಳು ವರದಿಯಾಗಿವೆ. 37 ಮಂದಿ ಮೃತಪಟ್ಟಿದ್ದಾರೆ.
ಇಂದು ವರದಿಯಾಗಿರುವ ಪ್ರಕರಣಗಳೂ ಸೇರಿದಂತೆ ರಾಜ್ಯದ ಒಟ್ಟಾರೆ ಸೋಂಕಿತರ ಸಂಖ್ಯೆ 29,05,124ಕ್ಕೆ ಏರಿದೆ. ಸೋಂಕಿನಿಂದ ಸಾವಿಗೀಡಾದವರ ಸಂಖ್ಯೆ 36,562ಕ್ಕೆ ತಲುಪಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1 ,632 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈ ವರೆಗೆ ಒಟ್ಟಾರೆ 28,44,742 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ಸದ್ಯ ಕರ್ನಾಟಕದ ಪಾಸಿಟಿವಿಟಿ ದರ ಶೇ. 1.43 ಆಗಿದೆ.
ಇಂದು ಯಾವ ಜಿಲ್ಲೆಯಲ್ಲಿ ಎಷ್ಟು ಮಂದಿಗೆ ಸೋಂಕು?
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.