<p><strong>ಮಡಿಕೇರಿ:</strong> ಇಡೀ ರಾಜ್ಯವೇ ಅನ್ಲಾಕ್ ಆಗುತ್ತಿದ್ದರೆ, ಸೋಮವಾರದ ಬಳಿಕವೂ ಕೊಡಗು ಜಿಲ್ಲೆ ಮಾತ್ರ ಲಾಕ್ಡೌನ್ ಸ್ಥಿತಿಯಲ್ಲಿಯೇ ಇರಲಿದೆ. ಪಾಸಿಟಿವ್ ದರ ಇಳಿಕೆಯಾಗದ ಕಾರಣ ಲಾಕ್ಡೌನ್ ಮುಂದುವರಿಸಲಾಗಿದೆ.</p>.<p>ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ‘ಕೊಡಗಿನಲ್ಲಿ ಸ್ವಲ್ಪ ಸಮಸ್ಯೆಯಾಗಿದ್ದು ಲಾಕ್ಡೌನ್ ತೆರವು ಅಧಿಕಾರವನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಪ್ರತಿನಿತ್ಯ ಪತ್ತೆಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿ ಜಿಲ್ಲಾಡಳಿತ ಅನ್ಲಾಕ್ ನಿರ್ಧಾರ ಕೈಗೊಳ್ಳಲಿದೆ. ಸದ್ಯಕ್ಕೆ ಅಲ್ಲಿ ಯಾವುದೇ ನಿಯಮ ಸಡಿಲಿಕೆ ಇಲ್ಲ’ ಎಂದು ಮಾಹಿತಿ ನೀಡಿದ್ದರು.</p>.<p>ಕೊಡಗಿನಲ್ಲಿ ಪಾಸಿಟಿವ್ ದರ ಶೇ 6.5ರಷ್ಟಿದೆ. ಪ್ರಕರಣಗಳೂ ಇಳಿಕೆ ಆಗುತ್ತಿಲ್ಲ. ಸೋಮವಾರಪೇಟೆ ತಾಲ್ಲೂಕಿನ ಆರು ಗ್ರಾಮಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಅಲ್ಲಿ ನಿಗಾ ವಹಿಸಲು ಆರೋಗ್ಯ ಸಚಿವರೇ ಆದೇಶಿಸಿದ್ದಾರೆ. ಆದರೂ ಅಲ್ಲಿ ಪ್ರಕರಣಗಳೂ ಹೆಚ್ಚುತ್ತಿವೆ. ಹೀಗಾಗಿ, ಇನ್ನೂ ಒಂದು ವಾರ ಲಾಕ್ಡೌನ್ ಸ್ಥಿತಿಯಲ್ಲಿ ಜಿಲ್ಲೆಯಿರಲಿದೆ.</p>.<p>ಪಾಸಿಟಿವ್ ದರವು ಶೇ 5ಕ್ಕಿಂತ ಕಡಿಮೆಯಾದ ಮೇಲೆ ನಿಯಮ ಸಡಿಲಿಕೆ ಸೂಕ್ತವೆಂದು ಈ ಹಿಂದೆ ನಡೆದಿದ್ದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ, ಭಾನುವಾರ ಸ್ಪಷ್ಟ ಮಾರ್ಗಸೂಚಿಗಳು ಹೊರಬೀಳುವ ಸಾಧ್ಯತೆಯಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ಜಿಲ್ಲಾಧಿಕಾರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಖರೀದಿಗೆ ಹೆಚ್ಚುವರಿ ಸಮಯ?: </strong>ಸದ್ಯದ ಸ್ಥಿತಿಯಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 1 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಇದೀಗ ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯ ತನಕ ಖರೀದಿಗೆ ಅವಕಾಶ ನೀಡುವ ಸಾಧ್ಯತೆಯಿದೆ.</p>.<p>ಮಡಿಕೇರಿಯಲ್ಲಿ ಶನಿವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪ್ರತಿಕ್ರಿಯಿಸಿ, ಪ್ರತಿನಿತ್ಯ ಸೋಂಕಿತರ ಪ್ರಮಾಣ ಏರುಪೇರಾಗುತ್ತಿದೆ. ಪಾಸಿಟಿವ್ ದರವು ಶೇ 6.5ರಷ್ಟಿದೆ. ಜಿಲ್ಲೆಯ ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿ, ಲಾಕ್ಡೌನ್ ಮುಂದುವರಿಸುತ್ತೇವೆ ಎಂದಿದ್ದರು.</p>.<p>ಪ್ರಾಕೃತಿಕ ವಿಕೋಪ, ಲಾಕ್ಡೌನ್... ಹೀಗೆ ಕೊಡಗಿನಲ್ಲಿ ಪ್ರವಾಸೋದ್ಯಮ ನೆಲಕಚ್ಚಿದೆ. ಇನ್ನೂ ಎಷ್ಟು ದಿನ ಇದೇ ಆತಂಕ, ನಷ್ಟದಲ್ಲಿ ಕಾಲಕಳೆಯುವುದು ಎಂದು ಹೋಂಸ್ಟೇ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಇಡೀ ರಾಜ್ಯವೇ ಅನ್ಲಾಕ್ ಆಗುತ್ತಿದ್ದರೆ, ಸೋಮವಾರದ ಬಳಿಕವೂ ಕೊಡಗು ಜಿಲ್ಲೆ ಮಾತ್ರ ಲಾಕ್ಡೌನ್ ಸ್ಥಿತಿಯಲ್ಲಿಯೇ ಇರಲಿದೆ. ಪಾಸಿಟಿವ್ ದರ ಇಳಿಕೆಯಾಗದ ಕಾರಣ ಲಾಕ್ಡೌನ್ ಮುಂದುವರಿಸಲಾಗಿದೆ.</p>.<p>ಬೆಂಗಳೂರಿನಲ್ಲಿ ಶನಿವಾರ ನಡೆದ ಸಭೆಯ ನಂತರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿ, ‘ಕೊಡಗಿನಲ್ಲಿ ಸ್ವಲ್ಪ ಸಮಸ್ಯೆಯಾಗಿದ್ದು ಲಾಕ್ಡೌನ್ ತೆರವು ಅಧಿಕಾರವನ್ನು ಜಿಲ್ಲಾಧಿಕಾರಿಗೆ ನೀಡಲಾಗಿದೆ. ಸ್ಥಳೀಯ ಮಟ್ಟದಲ್ಲಿ ಪ್ರತಿನಿತ್ಯ ಪತ್ತೆಯಾಗುತ್ತಿರುವ ಪ್ರಕರಣಗಳನ್ನು ಗಮನಿಸಿ ಜಿಲ್ಲಾಡಳಿತ ಅನ್ಲಾಕ್ ನಿರ್ಧಾರ ಕೈಗೊಳ್ಳಲಿದೆ. ಸದ್ಯಕ್ಕೆ ಅಲ್ಲಿ ಯಾವುದೇ ನಿಯಮ ಸಡಿಲಿಕೆ ಇಲ್ಲ’ ಎಂದು ಮಾಹಿತಿ ನೀಡಿದ್ದರು.</p>.<p>ಕೊಡಗಿನಲ್ಲಿ ಪಾಸಿಟಿವ್ ದರ ಶೇ 6.5ರಷ್ಟಿದೆ. ಪ್ರಕರಣಗಳೂ ಇಳಿಕೆ ಆಗುತ್ತಿಲ್ಲ. ಸೋಮವಾರಪೇಟೆ ತಾಲ್ಲೂಕಿನ ಆರು ಗ್ರಾಮಗಳನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಲಾಗಿದೆ. ಅಲ್ಲಿ ನಿಗಾ ವಹಿಸಲು ಆರೋಗ್ಯ ಸಚಿವರೇ ಆದೇಶಿಸಿದ್ದಾರೆ. ಆದರೂ ಅಲ್ಲಿ ಪ್ರಕರಣಗಳೂ ಹೆಚ್ಚುತ್ತಿವೆ. ಹೀಗಾಗಿ, ಇನ್ನೂ ಒಂದು ವಾರ ಲಾಕ್ಡೌನ್ ಸ್ಥಿತಿಯಲ್ಲಿ ಜಿಲ್ಲೆಯಿರಲಿದೆ.</p>.<p>ಪಾಸಿಟಿವ್ ದರವು ಶೇ 5ಕ್ಕಿಂತ ಕಡಿಮೆಯಾದ ಮೇಲೆ ನಿಯಮ ಸಡಿಲಿಕೆ ಸೂಕ್ತವೆಂದು ಈ ಹಿಂದೆ ನಡೆದಿದ್ದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ, ಭಾನುವಾರ ಸ್ಪಷ್ಟ ಮಾರ್ಗಸೂಚಿಗಳು ಹೊರಬೀಳುವ ಸಾಧ್ಯತೆಯಿದೆ.</p>.<p>ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ, ಜಿಲ್ಲಾಧಿಕಾರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p><strong>ಖರೀದಿಗೆ ಹೆಚ್ಚುವರಿ ಸಮಯ?: </strong>ಸದ್ಯದ ಸ್ಥಿತಿಯಲ್ಲಿ ಸೋಮವಾರ, ಬುಧವಾರ ಹಾಗೂ ಶುಕ್ರವಾರ ಬೆಳಿಗ್ಗೆ 6ರಿಂದ ಮಧ್ಯಾಹ್ನ 1 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವಿತ್ತು. ಇದೀಗ ಸೋಮವಾರದಿಂದ ಶುಕ್ರವಾರದ ತನಕ ಬೆಳಿಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯ ತನಕ ಖರೀದಿಗೆ ಅವಕಾಶ ನೀಡುವ ಸಾಧ್ಯತೆಯಿದೆ.</p>.<p>ಮಡಿಕೇರಿಯಲ್ಲಿ ಶನಿವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಪ್ರತಿಕ್ರಿಯಿಸಿ, ಪ್ರತಿನಿತ್ಯ ಸೋಂಕಿತರ ಪ್ರಮಾಣ ಏರುಪೇರಾಗುತ್ತಿದೆ. ಪಾಸಿಟಿವ್ ದರವು ಶೇ 6.5ರಷ್ಟಿದೆ. ಜಿಲ್ಲೆಯ ಜನಪ್ರತಿನಿಧಿಗಳ ಜೊತೆಗೆ ಚರ್ಚಿಸಿ, ಲಾಕ್ಡೌನ್ ಮುಂದುವರಿಸುತ್ತೇವೆ ಎಂದಿದ್ದರು.</p>.<p>ಪ್ರಾಕೃತಿಕ ವಿಕೋಪ, ಲಾಕ್ಡೌನ್... ಹೀಗೆ ಕೊಡಗಿನಲ್ಲಿ ಪ್ರವಾಸೋದ್ಯಮ ನೆಲಕಚ್ಚಿದೆ. ಇನ್ನೂ ಎಷ್ಟು ದಿನ ಇದೇ ಆತಂಕ, ನಷ್ಟದಲ್ಲಿ ಕಾಲಕಳೆಯುವುದು ಎಂದು ಹೋಂಸ್ಟೇ ಮಾಲೀಕರು ಅಳಲು ತೋಡಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>