‘ಕೋವಿಡ್–19 ಪ್ರಸ್ತುತ ಪರಿಸ್ಥಿತಿಯನ್ನು ಅವಲೋಕಿಸಿ ಕೇರಳ ಮತ್ತು ಗೋವಾದಿಂದ ರೈಲ್ವೆ, ವಿಮಾನ ಹಾಗೂ ರಸ್ತೆ ಸಾರಿಗೆ ಮತ್ತು ವೈಯಕ್ತಿಕ ವಾಹನದ ಮೂಲಕ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ಟಿ–ಪಿಸಿಆರ್ ನೆಗೆಟಿವ್ ಪರೀಕ್ಷಾ ವರದಿಯನ್ನು ಸಲ್ಲಿಸುವುದನ್ನು ಸ್ಥಗಿತಗೊಳಿಸಲಾಗಿದೆ’ ಎಂದು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.