<p><strong>ಬೆಂಗಳೂರು</strong>: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಕ್ರಮ ವಹಿಸಲು ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪರಿಹಾರ ವಿತರಿಸಲು ಒತ್ತಾಯಿಸಿ ಜ.24ರಂದು ಮನೆ– ಮನೆಯಿಂದಲೇ ಪ್ರತಿಭಟನೆ ನಡೆಸಲು ಏಳು ಪಕ್ಷಗಳ ಜಂಟಿ ಸಮಿತಿ ನಿರ್ಧರಿಸಿದೆ.</p>.<p>ಸಿಪಿಐ, ಸಿಪಿಐ(ಎಂ), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್), ಸಿಪಿಐ (ಎಂಎಲ್, ಲಿಬರೇಷನ್), ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ (ಎಐಎಫ್ಬಿ), ಆರ್ಪಿಐ (ಅಂಬೇಡ್ಕರ್ ವಾದ), ಸ್ವರಾಜ್ ಇಂಡಿಯಾ ಸೇರಿದಂತೆ ಒಟ್ಟು 7 ಪಕ್ಷಗಳ ಮುಖಂಡರು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಮುಖ್ಯಮಂತ್ರಿಗೆ ಬರೆದಿರುವ ಬಹಿರಂಗ ಪತ್ರವನ್ನು ಬಿಡುಗಡೆ ಮಾಡಿದರು.</p>.<p>‘ಮದುವೆ ಸಮಾರಂಭಗಳಿಗೆ 200 ಜನ ಸೇರಬಹುದು. ಜನರ ಹೋರಾಟಗಳಿಗೆ ಮಾತ್ರ ಅವಕಾಶ ನೀಡದಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ. ಈ ನಿರ್ಬಂಧಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು.ಬಸವರಾಜ ಒತ್ತಾಯಿಸಿದರು.</p>.<p>‘ಮನೆ ಆರೈಕೆಯಲ್ಲಿರುವ ಸೋಂಕಿತರಿಗೆ ಅಗತ್ಯ ನೆರವು ನೀಡಬೇಕು. ವಾರ್ಡ್ವಾರು ಸಮುದಾಯ ಅಡುಗೆ ಮನೆಗಳನ್ನು ತೆರೆದು ಪೌಷ್ಟಿಕ ಆಹಾರವನ್ನುಉಚಿತವಾಗಿ ಒದಗಿಸಬೇಕು. ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಮೃತರ ಕುಟುಂಬದವರಿಗೆ ₹4 ಲಕ್ಷ ಪರಿಹಾರ ನೀಡಬೇಕು. ಕೋವಿಡ್ ಯೋಧರ ಜೀವನ ಭದ್ರತೆಗೂ ಕ್ರಮ ವಹಿಸಬೇಕು' ಎಂದು ಆಗ್ರಹಿಸಿದರು.</p>.<p>ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಕುಟುಂಬಕ್ಕೂ ₹10 ಸಾವಿರ ನೀಡಬೇಕು. ಪ್ರತಿ ಕುಟುಂಬಕ್ಕೆ 10 ಕೆ.ಜಿ. ಪಡಿತರವನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನ ಉದ್ಯೋಗ ನೀಡಿ ಕೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು. ಶಾಲಾ ಕಾಲೇಜುಗಳ ಶುಲ್ಕ ಮನ್ನಾ ಮಾಡಬೇಕು’ ಎಂದು ಸಿಪಿಐ ರಾಜ್ಯ ಮುಖಂಡ ಪಿ.ವಿ. ಲೋಕೇಶ್ ಮತ್ತು ಎಸ್ಯುಸಿಐ(ಸಿ) ಮುಖಂಡ ಎಂ.ಎನ್.ಶ್ರೀರಾಮ್ ಆಗ್ರಹಿಸಿದರು.</p>.<p>ಆರ್ಪಿಐ(ಅಂಬೇಡ್ಕರ್ ವಾದ) ಅಧ್ಯಕ್ಷ ಮೋಹನ್ರಾಜ್, ‘ಮತಾಂತರ ನಿಷೇಧ ಮಸೂದೆ ಹಿಂದಕ್ಕೆ ಪಡೆಯಬೇಕು. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಿಸಬೇಕು. ಆರೋಗ್ಯ ವಲಯಕ್ಕೆ ಬಜೆಟ್ನಲ್ಲಿ ಅನುದಾನ ಹೆಚ್ಚಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು' ಎಂದು ಒತ್ತಾಯಿಸಿದರು.</p>.<p>ಒಟ್ಟು 15 ಬೇಡಿಕೆಗಳನ್ನು ಒಳಗೊಂಡ ಬಹಿರಂಗ ಪತ್ರವನ್ನು ಮುಖ್ಯಮಂತ್ರಿಗೆ ಕಳುಹಿಸಲಾಗಿದೆ. ಮನೆ- ಮನೆಯಿಂದಲೇ ಪ್ರತಿಭಟನೆ ನಡೆಸಿ ಆನ್ಲೈನ್ನಲ್ಲೂ ಮನವಿ ಸಲ್ಲಿಸಲಾಗುವುದು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಎನ್.ಉಮೇಶ್ ತಿಳಿಸಿದರು.</p>.<p><strong>‘ವಾರಾಂತ್ಯದ ಕರ್ಫ್ಯೂನಲ್ಲೂ ರಾಜಕೀಯ’</strong></p>.<p>‘ಸೋಂಕು ಪ್ರಮಾಣ ಕಡಿಮೆ ಇದ್ದಾಗ ವಾರಾಂತ್ಯದ ಕರ್ಫ್ಯೂ ವಿಧಿಸಿದವರು, ಹೆಚ್ಚಾದಾಗ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ’ ಎಂದು ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾರಾಂತ್ಯ ಕರ್ಫ್ಯೂ ಹಿಂತೆಗೆದುಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಈ ಹಿಂದೆಯೇ ಇದು ಬಿಜೆಪಿ ಕರ್ಫ್ಯೂ ಎಂದಿದ್ದೆ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆಂದು. ಸರ್ಕಾರ ಅವೈಜ್ಞಾನಿಕವಾಗಿ ನಿಯಮಗಳನ್ನು ಜಾರಿ ಮಾಡುತ್ತಿದೆ. ಆಂಧ್ರ, ತೆಲಂಗಾಣ, ಇತರ ರಾಜ್ಯಗಳಲ್ಲಿ ಇಲ್ಲದ ನಿಯಮ ಇಲ್ಲಿ ಯಾಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಕ್ರಮ ವಹಿಸಲು ಹಾಗೂ ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಪರಿಹಾರ ವಿತರಿಸಲು ಒತ್ತಾಯಿಸಿ ಜ.24ರಂದು ಮನೆ– ಮನೆಯಿಂದಲೇ ಪ್ರತಿಭಟನೆ ನಡೆಸಲು ಏಳು ಪಕ್ಷಗಳ ಜಂಟಿ ಸಮಿತಿ ನಿರ್ಧರಿಸಿದೆ.</p>.<p>ಸಿಪಿಐ, ಸಿಪಿಐ(ಎಂ), ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್), ಸಿಪಿಐ (ಎಂಎಲ್, ಲಿಬರೇಷನ್), ಅಖಿಲ ಭಾರತ ಫಾರ್ವರ್ಡ್ ಬ್ಲಾಕ್ (ಎಐಎಫ್ಬಿ), ಆರ್ಪಿಐ (ಅಂಬೇಡ್ಕರ್ ವಾದ), ಸ್ವರಾಜ್ ಇಂಡಿಯಾ ಸೇರಿದಂತೆ ಒಟ್ಟು 7 ಪಕ್ಷಗಳ ಮುಖಂಡರು ಶನಿವಾರ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಮುಖ್ಯಮಂತ್ರಿಗೆ ಬರೆದಿರುವ ಬಹಿರಂಗ ಪತ್ರವನ್ನು ಬಿಡುಗಡೆ ಮಾಡಿದರು.</p>.<p>‘ಮದುವೆ ಸಮಾರಂಭಗಳಿಗೆ 200 ಜನ ಸೇರಬಹುದು. ಜನರ ಹೋರಾಟಗಳಿಗೆ ಮಾತ್ರ ಅವಕಾಶ ನೀಡದಿರುವುದು ಪ್ರಜಾಪ್ರಭುತ್ವ ವಿರೋಧಿ ಕ್ರಮ. ಈ ನಿರ್ಬಂಧಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ಸಿಪಿಐ(ಎಂ) ಕಾರ್ಯದರ್ಶಿ ಯು.ಬಸವರಾಜ ಒತ್ತಾಯಿಸಿದರು.</p>.<p>‘ಮನೆ ಆರೈಕೆಯಲ್ಲಿರುವ ಸೋಂಕಿತರಿಗೆ ಅಗತ್ಯ ನೆರವು ನೀಡಬೇಕು. ವಾರ್ಡ್ವಾರು ಸಮುದಾಯ ಅಡುಗೆ ಮನೆಗಳನ್ನು ತೆರೆದು ಪೌಷ್ಟಿಕ ಆಹಾರವನ್ನುಉಚಿತವಾಗಿ ಒದಗಿಸಬೇಕು. ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಬೇಕು. ಮೃತರ ಕುಟುಂಬದವರಿಗೆ ₹4 ಲಕ್ಷ ಪರಿಹಾರ ನೀಡಬೇಕು. ಕೋವಿಡ್ ಯೋಧರ ಜೀವನ ಭದ್ರತೆಗೂ ಕ್ರಮ ವಹಿಸಬೇಕು' ಎಂದು ಆಗ್ರಹಿಸಿದರು.</p>.<p>ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಪ್ರತಿ ಕುಟುಂಬಕ್ಕೂ ₹10 ಸಾವಿರ ನೀಡಬೇಕು. ಪ್ರತಿ ಕುಟುಂಬಕ್ಕೆ 10 ಕೆ.ಜಿ. ಪಡಿತರವನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿದರು.</p>.<p>‘ಉದ್ಯೋಗ ಖಾತ್ರಿ ಯೋಜನೆಯಡಿ 200 ದಿನ ಉದ್ಯೋಗ ನೀಡಿ ಕೂಲಿಯನ್ನು ₹600ಕ್ಕೆ ಹೆಚ್ಚಿಸಬೇಕು. ಶಾಲಾ ಕಾಲೇಜುಗಳ ಶುಲ್ಕ ಮನ್ನಾ ಮಾಡಬೇಕು’ ಎಂದು ಸಿಪಿಐ ರಾಜ್ಯ ಮುಖಂಡ ಪಿ.ವಿ. ಲೋಕೇಶ್ ಮತ್ತು ಎಸ್ಯುಸಿಐ(ಸಿ) ಮುಖಂಡ ಎಂ.ಎನ್.ಶ್ರೀರಾಮ್ ಆಗ್ರಹಿಸಿದರು.</p>.<p>ಆರ್ಪಿಐ(ಅಂಬೇಡ್ಕರ್ ವಾದ) ಅಧ್ಯಕ್ಷ ಮೋಹನ್ರಾಜ್, ‘ಮತಾಂತರ ನಿಷೇಧ ಮಸೂದೆ ಹಿಂದಕ್ಕೆ ಪಡೆಯಬೇಕು. ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ವಹಿಸಬೇಕು. ಸರ್ಕಾರಿ ಆಸ್ಪತ್ರೆಗಳ ಸಂಖ್ಯೆ ಹೆಚ್ಚಿಸಬೇಕು. ಆರೋಗ್ಯ ವಲಯಕ್ಕೆ ಬಜೆಟ್ನಲ್ಲಿ ಅನುದಾನ ಹೆಚ್ಚಿಸಿ, ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸಬೇಕು' ಎಂದು ಒತ್ತಾಯಿಸಿದರು.</p>.<p>ಒಟ್ಟು 15 ಬೇಡಿಕೆಗಳನ್ನು ಒಳಗೊಂಡ ಬಹಿರಂಗ ಪತ್ರವನ್ನು ಮುಖ್ಯಮಂತ್ರಿಗೆ ಕಳುಹಿಸಲಾಗಿದೆ. ಮನೆ- ಮನೆಯಿಂದಲೇ ಪ್ರತಿಭಟನೆ ನಡೆಸಿ ಆನ್ಲೈನ್ನಲ್ಲೂ ಮನವಿ ಸಲ್ಲಿಸಲಾಗುವುದು ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕೆ.ಎನ್.ಉಮೇಶ್ ತಿಳಿಸಿದರು.</p>.<p><strong>‘ವಾರಾಂತ್ಯದ ಕರ್ಫ್ಯೂನಲ್ಲೂ ರಾಜಕೀಯ’</strong></p>.<p>‘ಸೋಂಕು ಪ್ರಮಾಣ ಕಡಿಮೆ ಇದ್ದಾಗ ವಾರಾಂತ್ಯದ ಕರ್ಫ್ಯೂ ವಿಧಿಸಿದವರು, ಹೆಚ್ಚಾದಾಗ ಹಿಂಪಡೆದಿದ್ದಾರೆ. ರಾಜಕೀಯ ಕಾರಣಕ್ಕೆ ಅವರು ಈ ರೀತಿ ಮಾಡುತ್ತಿದ್ದಾರೆ’ ಎಂದು ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.</p>.<p>ವಾರಾಂತ್ಯ ಕರ್ಫ್ಯೂ ಹಿಂತೆಗೆದುಕೊಂಡ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನಾನು ಈ ಹಿಂದೆಯೇ ಇದು ಬಿಜೆಪಿ ಕರ್ಫ್ಯೂ ಎಂದಿದ್ದೆ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆಂದು. ಸರ್ಕಾರ ಅವೈಜ್ಞಾನಿಕವಾಗಿ ನಿಯಮಗಳನ್ನು ಜಾರಿ ಮಾಡುತ್ತಿದೆ. ಆಂಧ್ರ, ತೆಲಂಗಾಣ, ಇತರ ರಾಜ್ಯಗಳಲ್ಲಿ ಇಲ್ಲದ ನಿಯಮ ಇಲ್ಲಿ ಯಾಕೆ’ ಎಂದು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>