<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಪೀಡಿತರ ಪೈಕಿಮಂಗಳವಾರ 10,421 ಮಂದಿ ಗುಣಮುಖವಾಗಿದ್ದಾರೆ.<br />ಈ ಮೂಲಕ ಈವರೆಗೆ ಗುಣಮುಖರಾದವರ ಸಂಖ್ಯೆ6.02 ಲಕ್ಷಕ್ಕೆ ತಲುಪಿದೆ.</p>.<p>ಹೊಸದಾಗಿ 8,191 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸದ್ಯ 1,13,549 ಸಕ್ರಿಯ ಪ್ರಕರಣಗಳು ಇವೆ.</p>.<p>ಬೆಂಗಳೂರು ನಗರದಲ್ಲಿ 28 ಜನರು ಸೇರಿದಂತೆ ಮಂಗಳವಾರ ರಾಜ್ಯದಲ್ಲಿ 87 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಾವಿನ ಒಟ್ಟು ಸಂಖ್ಯೆ 10,123ಕ್ಕೆ ತಲುಪಿದೆ. ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ಮೃತಪಟ್ಟವರ ಶೇಕಡಾವಾರು ಪ್ರಮಾಣ 1.06ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರು ನಗರದಲ್ಲಿ 3,336 ಹೊಸ ಪ್ರಕರಣಗಳು ದೃಢಪಟ್ಟಿದ್ದು, ರಾಜಧಾನಿಯಲ್ಲಿ ಸೋಂಕು ತಗುಲಿದವರ ಒಟ್ಟು ಸಂಖ್ಯೆ 2,88,831ಕ್ಕೆ ಏರಿಕೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ 416, ತುಮಕೂರು ಜಿಲ್ಲೆಯಲ್ಲಿ 391 ಬೆಳಗಾವಿ ಜಿಲ್ಲೆಯಲ್ಲಿ 358, ದಕ್ಷಿಣ ಕನ್ನಡದಲ್ಲಿ 314 ಹೊಸ ಪ್ರಕರಣಗಳು ಪತ್ತೆಯಾಗಿವೆ.</p>.<p>ರಾಜ್ಯದಲ್ಲಿ ಒಟ್ಟು 919 ಮಂದಿ ಕೋವಿಡ್ ಸೋಂಕಿತರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ 346 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಕೋವಿಡ್ ಪೀಡಿತರ ಪೈಕಿಮಂಗಳವಾರ 10,421 ಮಂದಿ ಗುಣಮುಖವಾಗಿದ್ದಾರೆ.<br />ಈ ಮೂಲಕ ಈವರೆಗೆ ಗುಣಮುಖರಾದವರ ಸಂಖ್ಯೆ6.02 ಲಕ್ಷಕ್ಕೆ ತಲುಪಿದೆ.</p>.<p>ಹೊಸದಾಗಿ 8,191 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಸದ್ಯ 1,13,549 ಸಕ್ರಿಯ ಪ್ರಕರಣಗಳು ಇವೆ.</p>.<p>ಬೆಂಗಳೂರು ನಗರದಲ್ಲಿ 28 ಜನರು ಸೇರಿದಂತೆ ಮಂಗಳವಾರ ರಾಜ್ಯದಲ್ಲಿ 87 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಸಾವಿನ ಒಟ್ಟು ಸಂಖ್ಯೆ 10,123ಕ್ಕೆ ತಲುಪಿದೆ. ಸೋಂಕು ದೃಢಪಟ್ಟ ಪ್ರಕರಣಗಳಲ್ಲಿ ಮೃತಪಟ್ಟವರ ಶೇಕಡಾವಾರು ಪ್ರಮಾಣ 1.06ಕ್ಕೆ ಏರಿಕೆಯಾಗಿದೆ.</p>.<p>ಬೆಂಗಳೂರು ನಗರದಲ್ಲಿ 3,336 ಹೊಸ ಪ್ರಕರಣಗಳು ದೃಢಪಟ್ಟಿದ್ದು, ರಾಜಧಾನಿಯಲ್ಲಿ ಸೋಂಕು ತಗುಲಿದವರ ಒಟ್ಟು ಸಂಖ್ಯೆ 2,88,831ಕ್ಕೆ ಏರಿಕೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ 416, ತುಮಕೂರು ಜಿಲ್ಲೆಯಲ್ಲಿ 391 ಬೆಳಗಾವಿ ಜಿಲ್ಲೆಯಲ್ಲಿ 358, ದಕ್ಷಿಣ ಕನ್ನಡದಲ್ಲಿ 314 ಹೊಸ ಪ್ರಕರಣಗಳು ಪತ್ತೆಯಾಗಿವೆ.</p>.<p>ರಾಜ್ಯದಲ್ಲಿ ಒಟ್ಟು 919 ಮಂದಿ ಕೋವಿಡ್ ಸೋಂಕಿತರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪೈಕಿ ಬೆಂಗಳೂರು ನಗರದಲ್ಲೇ 346 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>