<p><strong>ಬೆಂಗಳೂರು: </strong>ಎರಡನೇ ಅಲೆಯ ವೇಳೆಗೆ 0–6 ವಯಸ್ಸಿನ 57,364 ಮಕ್ಕಳು ಕೋವಿಡ್ನಿಂದ ಬಳಲಿದ್ದಾರೆ. 271 ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಮಿತಿಯ 37ನೇ ವರದಿಯನ್ನು ಸಮಿತಿ ಅಧ್ಯಕ್ಷೆ ಕೆ.ಪೂರ್ಣಿಮಾ ಅವರು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.</p>.<p>ಮನೆ ಮನೆಗೆ ತೆರಳಿ ಮಕ್ಕಳಲ್ಲಿರುವ ಅಪೌಷ್ಟಿಕತೆ ಕುರಿತು ಅಧ್ಯಯನ ಮಾಡಬೇಕು. ತೀವ್ರ ಅಪೌಷ್ಟಿಕತೆ ಸಮಸ್ಯೆ ಇರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ಸ್ಥಾಪಿಸಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.</p>.<p>ಭಿಕ್ಷಾಟನೆ ನಡೆಸುವವರ ಹಿಂದೆ ದೊಡ್ಡ ಜಾಲ ಇದ್ದು, ಅದನ್ನು ಮಟ್ಟ ಹಾಕುವಲ್ಲಿ ಗೃಹ ಇಲಾಖೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಮಿತಿ, ಭಿಕ್ಷಾಟನೆ ಪ್ರೋತ್ಸಾಹಿಸುವ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ<br />ಬೇಕು ಎಂದು ಸೂಚಿಸಿದೆ. ರಾಜ್ಯದಲ್ಲಿ ಭಿಕ್ಷುಕರ ಸಂಖ್ಯೆ ಕಡಿಮೆ ಮಾಡಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದೆ.</p>.<p><strong>ಸಮಿತಿಯ ಇತರ ಶಿಫಾರಸುಗಳು</strong></p>.<p>lಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಭಿಕ್ಷುಕರ ಪುನರ್ವಸತಿ ಕೆಲಸಗಳಿಗೆ ಇಲಾಖೆ ಸಮರ್ಪಕವಾಗಿ ಬಳಸಿ<br />ಕೊಳ್ಳಬೇಕು.</p>.<p>lಅಂಗವಿಕಲ ವ್ಯಕ್ತಿಗಳ ಹೆಸರಿನಲ್ಲಿಡುವ ಹೂಡಿಕೆಯ ಹಣವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಸಬೇಕು. 5 ವರ್ಷಗಳ ಠೇವಣಿ<br />ಮೊತ್ತವನ್ನು 10 ವರ್ಷಗಳ ವರೆಗೆ ವಿಸ್ತರಿಸಬೇಕು.</p>.<p>lಅಂಧ ಮಹಿಳೆಯರಿಗೆ ಜನಿಸುವ ಮಗುವಿಗೆ ಆರೈಕೆ ಮಾಡಲು ಪ್ರಸ್ತುತ ನೀಡುತ್ತಿರುವ ಆರೈಕೆ ಭತ್ಯೆಯನ್ನು ₹2 ಸಾವಿರದಿಂದ ₹4 ಸಾವಿರಕ್ಕೆ ಹೆಚ್ಚಿಸಬೇಕು. ಈ ಹಣವನ್ನು 5 ವರ್ಷಗಳ ಬದಲಿಗೆ 10 ವರ್ಷಗಳಿಗೆ ವಿಸ್ತರಿಸಬೇಕು. ಈ ಸೌಲಭ್ಯವನ್ನು ಕನಿಷ್ಠ ಎರಡು ಮಕ್ಕಳಿಗೆ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಎರಡನೇ ಅಲೆಯ ವೇಳೆಗೆ 0–6 ವಯಸ್ಸಿನ 57,364 ಮಕ್ಕಳು ಕೋವಿಡ್ನಿಂದ ಬಳಲಿದ್ದಾರೆ. 271 ಮಕ್ಕಳು ಮೃತಪಟ್ಟಿದ್ದಾರೆ ಎಂದು ವಿಧಾನಮಂಡಲದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿಯ ವರದಿಯಲ್ಲಿ ಉಲ್ಲೇಖಿಸಲಾಗಿದೆ.</p>.<p>ಸಮಿತಿಯ 37ನೇ ವರದಿಯನ್ನು ಸಮಿತಿ ಅಧ್ಯಕ್ಷೆ ಕೆ.ಪೂರ್ಣಿಮಾ ಅವರು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು.</p>.<p>ಮನೆ ಮನೆಗೆ ತೆರಳಿ ಮಕ್ಕಳಲ್ಲಿರುವ ಅಪೌಷ್ಟಿಕತೆ ಕುರಿತು ಅಧ್ಯಯನ ಮಾಡಬೇಕು. ತೀವ್ರ ಅಪೌಷ್ಟಿಕತೆ ಸಮಸ್ಯೆ ಇರುವ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಕ್ವಾರಂಟೈನ್ ಕೇಂದ್ರ ಸ್ಥಾಪಿಸಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.</p>.<p>ಭಿಕ್ಷಾಟನೆ ನಡೆಸುವವರ ಹಿಂದೆ ದೊಡ್ಡ ಜಾಲ ಇದ್ದು, ಅದನ್ನು ಮಟ್ಟ ಹಾಕುವಲ್ಲಿ ಗೃಹ ಇಲಾಖೆ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಸಮಿತಿ, ಭಿಕ್ಷಾಟನೆ ಪ್ರೋತ್ಸಾಹಿಸುವ ಸಂಸ್ಥೆಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳ<br />ಬೇಕು ಎಂದು ಸೂಚಿಸಿದೆ. ರಾಜ್ಯದಲ್ಲಿ ಭಿಕ್ಷುಕರ ಸಂಖ್ಯೆ ಕಡಿಮೆ ಮಾಡಲು ಇಲಾಖೆ ಕ್ರಮ ಕೈಗೊಳ್ಳಬೇಕು ಎಂದೂ ಹೇಳಿದೆ.</p>.<p><strong>ಸಮಿತಿಯ ಇತರ ಶಿಫಾರಸುಗಳು</strong></p>.<p>lಸರ್ಕಾರದಿಂದ ಬಿಡುಗಡೆಯಾದ ಅನುದಾನವನ್ನು ಭಿಕ್ಷುಕರ ಪುನರ್ವಸತಿ ಕೆಲಸಗಳಿಗೆ ಇಲಾಖೆ ಸಮರ್ಪಕವಾಗಿ ಬಳಸಿ<br />ಕೊಳ್ಳಬೇಕು.</p>.<p>lಅಂಗವಿಕಲ ವ್ಯಕ್ತಿಗಳ ಹೆಸರಿನಲ್ಲಿಡುವ ಹೂಡಿಕೆಯ ಹಣವನ್ನು ₹50 ಸಾವಿರದಿಂದ ₹1 ಲಕ್ಷಕ್ಕೆ ಏರಿಸಬೇಕು. 5 ವರ್ಷಗಳ ಠೇವಣಿ<br />ಮೊತ್ತವನ್ನು 10 ವರ್ಷಗಳ ವರೆಗೆ ವಿಸ್ತರಿಸಬೇಕು.</p>.<p>lಅಂಧ ಮಹಿಳೆಯರಿಗೆ ಜನಿಸುವ ಮಗುವಿಗೆ ಆರೈಕೆ ಮಾಡಲು ಪ್ರಸ್ತುತ ನೀಡುತ್ತಿರುವ ಆರೈಕೆ ಭತ್ಯೆಯನ್ನು ₹2 ಸಾವಿರದಿಂದ ₹4 ಸಾವಿರಕ್ಕೆ ಹೆಚ್ಚಿಸಬೇಕು. ಈ ಹಣವನ್ನು 5 ವರ್ಷಗಳ ಬದಲಿಗೆ 10 ವರ್ಷಗಳಿಗೆ ವಿಸ್ತರಿಸಬೇಕು. ಈ ಸೌಲಭ್ಯವನ್ನು ಕನಿಷ್ಠ ಎರಡು ಮಕ್ಕಳಿಗೆ ನೀಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>