<p><strong>ಬೆಂಗಳೂರು: </strong>ರಾಜ್ಯದಲ್ಲಿ ಮಂಗಳವಾರ 435 ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಯಿತು. ಗಣರಾಜ್ಯೋತ್ಸವ ದಿನದ ಪ್ರಯುಕ್ತ ರಜೆ ಇದ್ದ ಕಾರಣ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಿಲ್ಲ.</p>.<p>ರಾಜ್ಯದಲ್ಲಿ ಒಟ್ಟಾರೆ ಲಸಿಕೆ ಪಡೆದವರ ಸಂಖ್ಯೆ ಸೋಮವಾರ ಎರಡು ಲಕ್ಷ ಗಡಿ ದಾಟಿತ್ತು. ಲಸಿಕೆ ವಿತರಣೆ ಅಭಿಯಾನದ 11ನೇ ದಿನವಾದ ಮಂಗಳವಾರ 12 ಕೇಂದ್ರಗಳಲ್ಲಿ 1,094 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಶೇ 40 ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಲಸಿಕೆ ವಿತರಣೆಯಾಗಿದೆ. ಬೆಂಗಳೂರು ಗ್ರಾಮಾಂತರ 43, ಧಾರವಾಡ 40, ಹಾಸನ 227, ರಾಯಚೂರಿನಲ್ಲಿ 73 ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ.</p>.<p>ರಾಜ್ಯದಲ್ಲಿ ಈವರೆಗೂ ಒಟ್ಟಾರೆ 2.31 ಲಕ್ಷ ಜನ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಿಗೂ ತೀವ್ರ ಮತ್ತು ಗಂಭೀರ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಬುಧವಾರ ಎಲ್ಲ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p class="Subhead">9.36 ಲಕ್ಷಕ್ಕೆ ಏರಿಕೆ:</p>.<p>ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 9.36 ಲಕ್ಷಕ್ಕೆ ಏರಿದೆ. ಹೊಸದಾಗಿ 529 ಜನರಿಗೆ ಸೋಂಕು ದೃಢಪಟ್ಟಿದ್ದು, 738 ಜನ ಗುಣಮುಖರಾಗಿದ್ದಾರೆ. ಈವರೆಗೆ 9.18 ಲಕ್ಷ ಮಂದಿ ಕೋವಿಡ್ನಿಂದ ಮುಕ್ತರಾದಂತಾಗಿದೆ.</p>.<p>ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರು ಸಾವಿಗೀಡಾಗುವ ಮೂಲಕ ಮೃತರ ಸಂಖ್ಯೆ 12,204ಕ್ಕೆ ಏರಿದೆ.</p>.<p>ಸಕ್ರಿಯ ಪ್ರಕರಣಗಳ ಪೈಕಿ 6,633 ಮಂದಿ ಮನೆ ಹಾಗೂ ಆಸ್ಪತ್ರೆಗಳಲ್ಲಿ ಆರೈಕೆ ಮತ್ತು ಚಿಕಿತ್ಸೆಯಲ್ಲಿದ್ದಾರೆ. 147 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮಂಗಳವಾರ 65,563 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೆ 1.66 ಕೋಟಿ ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಇಲಾಖೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಮಂಗಳವಾರ 435 ಆರೋಗ್ಯ ಕಾರ್ಯಕರ್ತರಿಗೆ ಕೊರೊನಾ ಲಸಿಕೆ ನೀಡಲಾಯಿತು. ಗಣರಾಜ್ಯೋತ್ಸವ ದಿನದ ಪ್ರಯುಕ್ತ ರಜೆ ಇದ್ದ ಕಾರಣ, ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ವಿತರಿಸಲಿಲ್ಲ.</p>.<p>ರಾಜ್ಯದಲ್ಲಿ ಒಟ್ಟಾರೆ ಲಸಿಕೆ ಪಡೆದವರ ಸಂಖ್ಯೆ ಸೋಮವಾರ ಎರಡು ಲಕ್ಷ ಗಡಿ ದಾಟಿತ್ತು. ಲಸಿಕೆ ವಿತರಣೆ ಅಭಿಯಾನದ 11ನೇ ದಿನವಾದ ಮಂಗಳವಾರ 12 ಕೇಂದ್ರಗಳಲ್ಲಿ 1,094 ಫಲಾನುಭವಿಗಳನ್ನು ಗುರುತಿಸಲಾಗಿತ್ತು. ಈ ಪೈಕಿ ಶೇ 40 ರಷ್ಟು ಮಾತ್ರ ಗುರಿ ಸಾಧನೆಯಾಗಿದೆ.ನಾಲ್ಕು ಜಿಲ್ಲೆಗಳಲ್ಲಿ ಮಾತ್ರ ಲಸಿಕೆ ವಿತರಣೆಯಾಗಿದೆ. ಬೆಂಗಳೂರು ಗ್ರಾಮಾಂತರ 43, ಧಾರವಾಡ 40, ಹಾಸನ 227, ರಾಯಚೂರಿನಲ್ಲಿ 73 ಕಾರ್ಯಕರ್ತರು ಲಸಿಕೆ ಪಡೆದಿದ್ದಾರೆ.</p>.<p>ರಾಜ್ಯದಲ್ಲಿ ಈವರೆಗೂ ಒಟ್ಟಾರೆ 2.31 ಲಕ್ಷ ಜನ ಲಸಿಕೆ ಪಡೆದಿದ್ದಾರೆ. ಲಸಿಕೆ ಪಡೆದವರಲ್ಲಿ ಯಾರಿಗೂ ತೀವ್ರ ಮತ್ತು ಗಂಭೀರ ಅಡ್ಡ ಪರಿಣಾಮಗಳು ಕಾಣಿಸಿಕೊಂಡಿಲ್ಲ. ಬುಧವಾರ ಎಲ್ಲ ಜಿಲ್ಲೆಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ವಿತರಣೆ ಮಾಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ.</p>.<p class="Subhead">9.36 ಲಕ್ಷಕ್ಕೆ ಏರಿಕೆ:</p>.<p>ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ 9.36 ಲಕ್ಷಕ್ಕೆ ಏರಿದೆ. ಹೊಸದಾಗಿ 529 ಜನರಿಗೆ ಸೋಂಕು ದೃಢಪಟ್ಟಿದ್ದು, 738 ಜನ ಗುಣಮುಖರಾಗಿದ್ದಾರೆ. ಈವರೆಗೆ 9.18 ಲಕ್ಷ ಮಂದಿ ಕೋವಿಡ್ನಿಂದ ಮುಕ್ತರಾದಂತಾಗಿದೆ.</p>.<p>ಬೆಂಗಳೂರು ಹಾಗೂ ಮೈಸೂರಿನಲ್ಲಿ ತಲಾ ಇಬ್ಬರು ಸಾವಿಗೀಡಾಗುವ ಮೂಲಕ ಮೃತರ ಸಂಖ್ಯೆ 12,204ಕ್ಕೆ ಏರಿದೆ.</p>.<p>ಸಕ್ರಿಯ ಪ್ರಕರಣಗಳ ಪೈಕಿ 6,633 ಮಂದಿ ಮನೆ ಹಾಗೂ ಆಸ್ಪತ್ರೆಗಳಲ್ಲಿ ಆರೈಕೆ ಮತ್ತು ಚಿಕಿತ್ಸೆಯಲ್ಲಿದ್ದಾರೆ. 147 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಮಂಗಳವಾರ 65,563 ಮಂದಿಗೆ ಕೋವಿಡ್ ಪರೀಕ್ಷೆ ಮಾಡಲಾಗಿದ್ದು, ಈವರೆಗೆ 1.66 ಕೋಟಿ ಮಂದಿ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಇಲಾಖೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>