ಇದಕ್ಕಾಗಿ ಆರೋಗ್ಯ ಕಾರ್ಯಕರ್ತರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ ಮನೆ ಭೇಟಿ ನೀಡಿ ಕೋವಿಡ್ ಗುಣಮುಖರ ಆರೋಗ್ಯದ ಮಾಹಿತಿ ಸಂಗ್ರಹಿಸಿ, ರೋಗ ಲಕ್ಷಣ ಆಧರಿಸಿ ಕಫದ ಮಾದರಿ ಸಂಗ್ರಹಿಸಲಿದ್ದಾರೆ. ಅಗತ್ಯವಿದ್ದವರನ್ನು ಆಸ್ಪತ್ರೆಗೆ ಕರೆತಂದು ಹೆಚ್ಚಿನ ಪರೀಕ್ಷೆಗೆ ಒಳಪಡಿಸಲಿದ್ದಾರೆ ಎಂದು ಆರೋಗ್ಯ ಇಲಾಖೆ (ಟಿಬಿ ವಿಭಾಗ) ಜಂಟಿ ನಿದೇರ್ಶಕ ಡಾ. ರಮೇಶ್ ರೆಡ್ಡಿ ತಿಳಿಸಿದ್ದಾರೆ.