ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ತಜ್ಞರ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿದೇಶಗಳಿಂದ ಪ್ರತಿದಿನ 2,500 ಜನರು ಬರುತ್ತಿದ್ದಾರೆ. ಓಮೈಕ್ರಾನ್ ತಳಿಯ ವೈರಾಣು ಪತ್ತೆಯಾಗಿರುವ ದೇಶಗಳಿಂದ ಬರುವವರಿಗೆ ಮಾತ್ರ ಆರ್ಟಿ–ಪಿಸಿಆರ್ ಪರೀಕ್ಷೆ ನಡೆಸಲಾಗುತ್ತಿತ್ತು. ಆದರೆ, ವಿದೇಶಗಳಿಂದ ಬರುವ ಎಲ್ಲರಿಗೂ ಆರ್ಟಿ–ಪಿಸಿಆರ್ ವಿಧಾನದಲ್ಲಿ ಪರೀಕ್ಷೆ ಮಾಡುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ’ ಎಂದರು.