‘ಈ ಮೊದಲು ರೋಗ ಪತ್ತೆಯಾಗಿ 10–15 ವರ್ಷಗಳ ಬಳಿಕ ದೇಶಕ್ಕೆ ಲಸಿಕೆ ಬರುತ್ತಿತ್ತು. ಆದರೆ, ಈಗ ಕೋವಿಡ್ ಕಾಣಿಸಿಕೊಂಡ ವರ್ಷದೊಳಗೆ ಲಸಿಕೆ ಸಂಶೋಧಿಸಿ, ರಫ್ತು ಮಾಡಲಾಗಿದೆ. ಕೋವಿಡ್ ಕಾಣಿಸಿಕೊಂಡಾಗ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರು ಯೋಧರಂತೆ ಕಾರ್ಯನಿರ್ವಹಿಸಿದರು. ಕೋವಿಡ್ ಲಸಿಕೆಯ ಮುನ್ನೆಚ್ಚರಿಕೆ ಡೋಸ್ಗಳನ್ನು ಪ್ರತಿಯೊಬ್ಬರು ಪಡೆದುಕೊಳ್ಳುವ ಮೂಲಕ ವೈರಾಣುವಿನಿಂದ ರಕ್ಷಣೆ ಪಡೆದುಕೊಳ್ಳಬೇಕು. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ, ಅರ್ಹ ಫಲಾನುಭವಿಗಳಿಗೆ ಮುನ್ನೆಚ್ಚರಿಕೆ ಡೋಸ್ ನೀಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.