<p><strong>ಹಾಸನ</strong>: ಕೋವಿಡ್ ಲಸಿಕೆ ನೀಡು ವಂತೆ ಆಗ್ರಹಿಸಿಸಾರ್ವಜನಿಕರು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ಮನೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸೀಮಿತ ಪ್ರಮಾಣದ ಲಸಿಕೆ ಪೂರೈಕೆಯಾಗಿದ್ದು, ಕೆಲದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿರುವುದರಿಂದ ನೂಕು ನುಗ್ಗಲು ಉಂಟಾಗುತ್ತಿದೆ. ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಹಿಮ್ಸ್) ಲಸಿಕಾ ಕೇಂದ್ರದಲ್ಲಿ ‘ಲಸಿಕೆ ಲಭ್ಯವಿಲ್ಲ’ ಎಂಬ ಫಲಕ ಹಾಕಿದ್ದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಧರಣಿ ನಡೆಸಿ ದರು.ಹಲವರಿಗೆಗುರುವಾರವೇ ಟೋಕನ್ ನೀಡಲಾಗಿತ್ತು.</p>.<p>‘ಲಸಿಕೆ ಪಡೆಯುವಂತೆ ಸರ್ಕಾರವೇ ಜಾಗೃತಿ ಮೂಡಿಸುತ್ತಿದೆ. ಆದರೆ, ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಸುತ್ತಿಲ್ಲ. ನಿತ್ಯ ಸಾಲಿನಲ್ಲಿ ನಿಂತು ಹೋಗುವಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಗೆ ಪ್ರತಿದಿನ 15 ಸಾವಿರ ಡೋಸ್ ಲಸಿಕೆ ಅಗತ್ಯವಿದೆ. ಸದ್ಯ 2-3ಸಾವಿರ ಡೋಸ್ ಲಸಿಕೆ ಲಭ್ಯವಾಗುತ್ತಿದೆ. ಅಗತ್ಯ ಲಸಿಕೆ ಪೂರೈಸುವಂತೆ ಮನವಿಮಾಡಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಕೋವಿಡ್ ಲಸಿಕೆ ನೀಡು ವಂತೆ ಆಗ್ರಹಿಸಿಸಾರ್ವಜನಿಕರು ಜಿಲ್ಲಾಧಿಕಾರಿ ಆರ್.ಗಿರೀಶ್ ಅವರ ಮನೆ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.</p>.<p>ಸೀಮಿತ ಪ್ರಮಾಣದ ಲಸಿಕೆ ಪೂರೈಕೆಯಾಗಿದ್ದು, ಕೆಲದಿನಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಿರುವುದರಿಂದ ನೂಕು ನುಗ್ಗಲು ಉಂಟಾಗುತ್ತಿದೆ. ಹಾಸನ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ಹಿಮ್ಸ್) ಲಸಿಕಾ ಕೇಂದ್ರದಲ್ಲಿ ‘ಲಸಿಕೆ ಲಭ್ಯವಿಲ್ಲ’ ಎಂಬ ಫಲಕ ಹಾಕಿದ್ದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಧರಣಿ ನಡೆಸಿ ದರು.ಹಲವರಿಗೆಗುರುವಾರವೇ ಟೋಕನ್ ನೀಡಲಾಗಿತ್ತು.</p>.<p>‘ಲಸಿಕೆ ಪಡೆಯುವಂತೆ ಸರ್ಕಾರವೇ ಜಾಗೃತಿ ಮೂಡಿಸುತ್ತಿದೆ. ಆದರೆ, ಅಗತ್ಯ ಪ್ರಮಾಣದಲ್ಲಿ ಲಸಿಕೆ ಪೂರೈಸುತ್ತಿಲ್ಲ. ನಿತ್ಯ ಸಾಲಿನಲ್ಲಿ ನಿಂತು ಹೋಗುವಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.</p>.<p>‘ಜಿಲ್ಲೆಗೆ ಪ್ರತಿದಿನ 15 ಸಾವಿರ ಡೋಸ್ ಲಸಿಕೆ ಅಗತ್ಯವಿದೆ. ಸದ್ಯ 2-3ಸಾವಿರ ಡೋಸ್ ಲಸಿಕೆ ಲಭ್ಯವಾಗುತ್ತಿದೆ. ಅಗತ್ಯ ಲಸಿಕೆ ಪೂರೈಸುವಂತೆ ಮನವಿಮಾಡಲಾಗಿದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>