<p><strong>ನವದೆಹಲಿ:</strong> ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನಸುಖ್ಲಾಲ್ ಮಾಂಡವಿಯಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್–19 ಮೂರನೇ ಅಲೆಯ ಸಮರ್ಪಕ ನಿರ್ವಹಣೆ ನಿಟ್ಟಿನಲ್ಲಿ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಮನವಿ ಸಲ್ಲಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಕೂಡಲೇ 1.50 ಕೋಟಿ ಕೋವಿಡ್ ಲಸಿಕೆ ವಿತರಣೆಗೆ ಮನವಿ ಸಲ್ಲಿಸಲಾಗಿದೆ. ಮಾಸಿಕ ಆಗಸ್ಟ್ ತಿಂಗಳಲ್ಲಿ 1 ಕೋಟಿ ಲಸಿಕೆ ಹಂಚಿಕೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು, 3ನೇ ಅಲೆ ತಡೆಗಾಗಿ ₹ 800 ಕೋಟಿ ಹಣಕಾಸಿನ ನೆರವು ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.<br /><br />ರಾಜ್ಯದಲ್ಲಿ ಉತ್ತಮ ಮಳೆ ಸುರಿದಿರುವ ಕಾರಣ ರೈತರ ರಸಗೊಬ್ಬರದ ಬೇಡಿಕೆ ಪೂರೈಕೆಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದ್ದು, ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-was-talks-with-nirmala-sitharaman-on-the-release-of-gst-funds-853372.html" target="_blank">ಕೇಂದ್ರದಿಂದ ಜಿಎಸ್ಟಿ ಬಾಕಿ ಬಿಡುಗಡೆಯ ಭರವಸೆ: ನಿರ್ಮಲಾ ಜತೆ ಬೊಮ್ಮಾಯಿ ಚರ್ಚೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೇಂದ್ರದ ಆರೋಗ್ಯ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನಸುಖ್ಲಾಲ್ ಮಾಂಡವಿಯಾ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.</p>.<p>ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕೋವಿಡ್–19 ಮೂರನೇ ಅಲೆಯ ಸಮರ್ಪಕ ನಿರ್ವಹಣೆ ನಿಟ್ಟಿನಲ್ಲಿ ಅಗತ್ಯ ವೈದ್ಯಕೀಯ ನೆರವು ನೀಡುವಂತೆ ಮನವಿ ಸಲ್ಲಿಸಲಾಗಿದೆ’ ಎಂದು ಬೊಮ್ಮಾಯಿ ಹೇಳಿದರು.</p>.<p>ಸಾರ್ವಜನಿಕರಿಗೆ ನೀಡುವ ನಿಟ್ಟಿನಲ್ಲಿ ಕೂಡಲೇ 1.50 ಕೋಟಿ ಕೋವಿಡ್ ಲಸಿಕೆ ವಿತರಣೆಗೆ ಮನವಿ ಸಲ್ಲಿಸಲಾಗಿದೆ. ಮಾಸಿಕ ಆಗಸ್ಟ್ ತಿಂಗಳಲ್ಲಿ 1 ಕೋಟಿ ಲಸಿಕೆ ಹಂಚಿಕೆ ಮಾಡುವುದಾಗಿ ಸಚಿವರು ಭರವಸೆ ನೀಡಿದ್ದಾರೆ ಎಂದು ಅವರು, 3ನೇ ಅಲೆ ತಡೆಗಾಗಿ ₹ 800 ಕೋಟಿ ಹಣಕಾಸಿನ ನೆರವು ನೀಡುವುದಕ್ಕೆ ಒಪ್ಪಿಗೆ ಸೂಚಿಸಿದ್ದಾರೆ ಎಂದರು.<br /><br />ರಾಜ್ಯದಲ್ಲಿ ಉತ್ತಮ ಮಳೆ ಸುರಿದಿರುವ ಕಾರಣ ರೈತರ ರಸಗೊಬ್ಬರದ ಬೇಡಿಕೆ ಪೂರೈಕೆಗೂ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದ್ದು, ಸಚಿವರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿ ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/karnataka-news/cm-basavaraj-bommai-was-talks-with-nirmala-sitharaman-on-the-release-of-gst-funds-853372.html" target="_blank">ಕೇಂದ್ರದಿಂದ ಜಿಎಸ್ಟಿ ಬಾಕಿ ಬಿಡುಗಡೆಯ ಭರವಸೆ: ನಿರ್ಮಲಾ ಜತೆ ಬೊಮ್ಮಾಯಿ ಚರ್ಚೆ</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>