<p><strong>ಬೆಂಗಳೂರು: </strong>ರಾಜ್ಯದಲ್ಲಿ ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆಗಿಂತಲೂ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕೊರೊನಾ ವೈರಸ್ ಸೋಂಕು ಖಚಿತ ಪ್ರಮಾಣ ಶೇ.1.09 ಹಾಗೂ ಕೋವಿಡ್ನಿಂದ ಮೃತಪಟ್ಟವರ ಪ್ರಮಾಣ ಶೇ.1.80 ದಾಖಲಾಗಿದೆ.</p>.<p>ಕೋವಿಡ್ ದೃಢಪಟ್ಟ 1,826 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 33 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 1,618 ಮಂದಿ ಗುಣಮುಖರಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.</p>.<p>ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 29.22 ಲಕ್ಷ ದಾಟಿದ್ದು, ಈ ಪೈಕಿ 28.63 ಲಕ್ಷಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ ಹಾಗೂ 36,881 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಾದ್ಯಂತ 22,851 ಪ್ರಕರಣಗಳು ಸಕ್ರಿಯವಾಗಿವೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/kerala-reported-more-than-half-of-indias-total-covid-cases-in-past-seven-days-856548.html">ದೇಶದ ಕೋವಿಡ್ ಪ್ರಕರಣಗಳಲ್ಲಿ ಕೇರಳದ್ದೇ ಅರ್ಧ ಪಾಲು </a></p>.<p>ಕೇರಳದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ದಕ್ಷಿಣ ಕನ್ನಡದಲ್ಲಿ 422 ಪ್ರಕರಣಗಳು, ಬೆಂಗಳೂರಿನಲ್ಲಿ 377, ಹಾಸನದಲ್ಲಿ 175, ಉಡುಪಿಯಲ್ಲಿ 130, ಮೈಸೂರಿನಲ್ಲಿ 118 ಹೊಸ ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಬುಧವಾರ 24 ಗಂಟೆಗಳ ಅಂತರದಲ್ಲಿ ಕೋವಿಡ್ನಿಂದ ಚೇತರಿಸಿಕೊಂಡವರ ಸಂಖ್ಯೆಗಿಂತಲೂ ಸೋಂಕು ದೃಢಪಟ್ಟ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಕೊರೊನಾ ವೈರಸ್ ಸೋಂಕು ಖಚಿತ ಪ್ರಮಾಣ ಶೇ.1.09 ಹಾಗೂ ಕೋವಿಡ್ನಿಂದ ಮೃತಪಟ್ಟವರ ಪ್ರಮಾಣ ಶೇ.1.80 ದಾಖಲಾಗಿದೆ.</p>.<p>ಕೋವಿಡ್ ದೃಢಪಟ್ಟ 1,826 ಹೊಸ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸೋಂಕಿನಿಂದ 33 ಮಂದಿ ಸಾವಿಗೀಡಾಗಿದ್ದಾರೆ. 24 ಗಂಟೆಗಳಲ್ಲಿ 1,618 ಮಂದಿ ಗುಣಮುಖರಾಗಿರುವುದು ಆರೋಗ್ಯ ಇಲಾಖೆಯ ಪ್ರಕಟಣೆಯಿಂದ ತಿಳಿದು ಬಂದಿದೆ.</p>.<p>ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 29.22 ಲಕ್ಷ ದಾಟಿದ್ದು, ಈ ಪೈಕಿ 28.63 ಲಕ್ಷಕ್ಕೂ ಹೆಚ್ಚು ಜನ ಗುಣಮುಖರಾಗಿದ್ದಾರೆ ಹಾಗೂ 36,881 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಾದ್ಯಂತ 22,851 ಪ್ರಕರಣಗಳು ಸಕ್ರಿಯವಾಗಿವೆ.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/kerala-reported-more-than-half-of-indias-total-covid-cases-in-past-seven-days-856548.html">ದೇಶದ ಕೋವಿಡ್ ಪ್ರಕರಣಗಳಲ್ಲಿ ಕೇರಳದ್ದೇ ಅರ್ಧ ಪಾಲು </a></p>.<p>ಕೇರಳದಲ್ಲಿ ಸೋಂಕು ವ್ಯಾಪಿಸುತ್ತಿದ್ದು, ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡದಲ್ಲೂ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದೆ. ದಕ್ಷಿಣ ಕನ್ನಡದಲ್ಲಿ 422 ಪ್ರಕರಣಗಳು, ಬೆಂಗಳೂರಿನಲ್ಲಿ 377, ಹಾಸನದಲ್ಲಿ 175, ಉಡುಪಿಯಲ್ಲಿ 130, ಮೈಸೂರಿನಲ್ಲಿ 118 ಹೊಸ ಪ್ರಕರಣಗಳು ದಾಖಲಾಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>