ಕೋವಿಡ್ಪೀಡಿತರಲ್ಲಿ 17 ಮಂದಿ ಮೃತಪಟ್ಟಿದ್ದಾರೆ. 9 ಜಿಲ್ಲೆಗಳಲ್ಲಿ ಹೊಸದಾಗಿ ಮರಣ ಪ್ರಕರಣ ವರದಿಯಾಗಿದೆ. ಬೆಂಗಳೂರಿನಲ್ಲಿ 6, ದಕ್ಷಿಣ ಕನ್ನಡದಲ್ಲಿ 3 ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಆರು ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.ಮರಣ ಪ್ರಮಾಣ ದರ ಶೇ 1.34ರಷ್ಟಿದೆ. ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 37,278ಕ್ಕೆ ತಲುಪಿದೆ. ಸೋಂಕಿತರಲ್ಲಿ 1,384 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 28.91 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 18,758ಕ್ಕೆ ಇಳಿಕೆಯಾಗಿದೆ.