ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಐಸಿಯು ದಾಖಲಾತಿ 405ಕ್ಕೆ ಏರಿಕೆ

Last Updated 10 ಏಪ್ರಿಲ್ 2021, 16:16 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಪೀಡಿತರಾದ ಕೆಲವರಲ್ಲಿ ಗಂಭೀರ ಸ್ವರೂಪದ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದಾಗಿ ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಏರುಗತಿ ಪಡೆದಿದ್ದು, ರಾಜ್ಯದ ವಿವಿಧ ಆಸ್ಪತ್ರೆಗಳ ಐಸಿಯುನಲ್ಲಿ 405 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ಸೋಂಕಿತರಲ್ಲಿ ಮತ್ತೆ 36 ಮಂದಿ ಸಾವಿಗೀಡಾಗಿರುವುದು ಶನಿವಾರ ದೃಢಪಟ್ಟಿದೆ. ಬೆಂಗಳೂರಿನಲ್ಲಿ 19 ಮಂದಿ, ಮೈಸೂರಿನಲ್ಲಿ 5 ಮಂದಿ, ತುಮಕೂರು, ಕಲಬುರ್ಗಿ ಹಾಗೂ ಬೀದರ್‌ನಲ್ಲಿ ತಲಾ ಇಬ್ಬರು, ಬಳ್ಳಾರಿ, ಚಾಮರಾಜನಗರ, ಹಾಸನ ಹಾಗೂ ಉತ್ತರ ಕನ್ನಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇವರಲ್ಲಿ ಐವರನ್ನು ಹೊರತುಪಡಿಸಿ ಉಳಿದವರು 50 ವರ್ಷ ಮೇಲ್ಪಟ್ಟವರಾಗಿದ್ದಾರೆ. ಮರಣ ಹೊಂದಿದವರಲ್ಲಿ ಬಹುತೇಕರು ಕೋವಿಡೇತರ ಅನಾರೋಗ್ಯ ಸಮಸ್ಯೆಗಳನ್ನು ಕೂಡ ಎದುರಿಸಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,849ಕ್ಕೆ ಏರಿಕೆಯಾಗಿದೆ. ಈ ತಿಂಗಳಲ್ಲಿಯೇ 282 ಮಂದಿ ಮೃತಪಟ್ಟಿದ್ದಾರೆ.

ರಾಜ್ಯದಲ್ಲಿ ಒಂದು ದಿನದ ಅವಧಿಯಲ್ಲಿ 98 ಸಾವಿರ ಪರೀಕ್ಷೆಗಳನ್ನು ನಡೆಸಲಾಗಿದೆ. 6,955 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಸೋಂಕು ದೃಢ ಪ್ರಮಾಣ ಶೇ 7.04ಕ್ಕೆ ಏರಿಕೆಯಾಗಿದೆ. ಬೆಂಗಳೂರು (4,384), ಕಲಬುರ್ಗಿ (276), ಮೈಸೂರು (266), ಬೀದರ್ (215), ತುಮಕೂರು (206), ಬೆಂಗಳೂರು ಗ್ರಾಮಾಂತರ (152), ದಕ್ಷಿಣ ಕನ್ನಡ (137), ಕೋಲಾರ (121), ಮಂಡ್ಯ (119) ಹಾಗೂ ಹಾಸನ (100) ಜಿಲ್ಲೆಯಲ್ಲಿ ಅಧಿಕ ಪ್ರಕರಣಗಳು ವರದಿಯಾಗಿವೆ.

ಈ ತಿಂಗಳು 10 ದಿನಗಳಲ್ಲಿ 58,036 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಸೋಂಕಿತರಾದವರ ಸಂಖ್ಯೆ 10.55 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT