ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: ಸೋಂಕು ಗುಣಮುಖ ಪ್ರಮಾಣ ಏರಿಕೆ, ಹೊಸ ಪ್ರಕರಣ ಇಳಿಕೆ

Last Updated 2 ಸೆಪ್ಟೆಂಬರ್ 2021, 14:33 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಕೋವಿಡ್‌–19 ದೃಢಪಟ್ಟ 1,240 ಹೊಸ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 1,252 ಮಂದಿ ಗುಣಮುಖರಾಗಿದ್ದಾರೆ ಹಾಗೂ 22 ಮಂದಿ ಸಾವಿಗೀಡಾಗಿದ್ದಾರೆ.

ರಾಜ್ಯದಾದ್ಯಂತ 18,378 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌–19 ದೃಢ ಪ್ರಮಾಣ ಶೇ 0.74ರಷ್ಟು ಮತ್ತು ಸೋಂಕಿನಿಂದ ಮೃತಪಟ್ಟವರ ಪ್ರಮಾಣ ಶೇ 1.77ರಷ್ಟು ದಾಖಲಾಗಿರುವುದಾಗಿ ಆರೋಗ್ಯ ಇಲಾಖೆ ಪ್ರಕಟಿಸಿದೆ.

ಬೆಂಗಳೂರಿನಲ್ಲಿ 319 ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 264 ಪ್ರಕರಣಗಳು, ಉಡುಪಿಯಲ್ಲಿ 111, ಮೈಸೂರಿನಲ್ಲಿ 88, ಹಾಸನದಲ್ಲಿ 76, ಕೊಡಗಿನಲ್ಲಿ 52, ಬೆಳಗಾವಿಯಲ್ಲಿ 49 ಹೊಸ ಪ್ರಕರಣಗಳು ದಾಖಲಾಗಿವೆ.

ಒಟ್ಟು ಕೋವಿಡ್‌ ಪ್ರಕರಣಗಳ ಸಂಖ್ಯೆ 29.51 ಲಕ್ಷ ದಾಟಿದ್ದು, ಈ ಪೈಕಿ 28.96 ಲಕ್ಷಕ್ಕಿಂತ ಹೆಚ್ಚು ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 37,361 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT