ಜಿಲ್ಲೆಯ ಎಂಟು ಆಸ್ಪತ್ರೆಗಳಲ್ಲಿ ಶುಕ್ರವಾರ ಕೋವಿಡ್ ಡ್ರೈ ರನ್ ಕಾರ್ಯಕ್ರಮ ನಡೆದಿದ್ದು, ಜಿಲ್ಲಾಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅಶ್ವತ್ಥನಾರಾಯಣ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ತಾವೇ ನೋಂದಣಿ ಮಾಡಿಸಿ, ದೇಹ ಉಷ್ಣತೆ ತಪಾಸಣೆ ಮಾಡಿಸಿಕೊಂಡು ಒಳ ಬಂದ ಅವರಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕುರಿತು ಮಾಹಿತಿ ಹಂಚಿಕೊಂಡರು.