ಬೆಂಗಳೂರು: ಕರ್ನಾಟಕ ಜಾನುವಾರು ಸಂರಕ್ಷಣೆ ಕಾಯ್ದೆ –2020ರ ನಿಯಮಾವಳಿ ರೂಪುಗೊಳ್ಳದೆ ಇದ್ದರೂ ರಾಜ್ಯದಲ್ಲಿ 50ಕ್ಕೂ ಹೆಚ್ಚು ಎಫ್ಐಆರ್ ದಾಖಲಿಸಲಾಗಿದೆ ಎಂದು ಈ ಕಾಯ್ದೆ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಅರ್ಜಿದಾರರು ಆರೋಪಿಸಿದ್ದು, ಹೊಸ ಕಾಯ್ದೆಯಡಿ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸರ್ಕಾರ ಮತ್ತೊಮ್ಮೆ ಭರವಸೆ ನೀಡಿದೆ.