ಗಾಂಧಿ ಜಯಂತಿ ಆಚರಣೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಾಂಗ್ರೆಸ್, ಓಲೈಕೆ ರಾಜಕಾರಣಕ್ಕಾಗಿ ಗೋಹತ್ಯೆ ಪ್ರೋತ್ಸಾಹಿಸುವಾಗ, ಗೋ ಹತ್ಯೆ ನಿಷೇಧಿಸಲು ಹೇಳಿದ ಮಹಾತ್ಮ ಗಾಂಧಿಯವರ ಮಾತು ನಿಮಗೆ ನೆನಪಾಗಲಿಲ್ಲ. ಕಾಂಗ್ರೆಸ್ಸಿಗರೆ, ಈಗ ಯಾವ ನೈತಿಕತೆಯಿಂದ ನೀವು ಗಾಂಧಿ ಜಯಂತಿ ಆಚರಿಸುತ್ತಿದ್ದೀರಿ’ ಎಂದು ಪ್ರಶ್ನಿಸಿದೆ.