'ಮಸೂದೆ ಮಂಡನೆ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪನವರ ಜತೆ ಚರ್ಚಿಸಿ, ಒಪ್ಪಿಗೆ ಪಡೆಯಲಾಗಿದೆ. ಇದಕ್ಕೆ ಅಗತ್ಯವಿರುವ ತಯಾರಿ ನಡೆಸಲಾಗಿದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿರುವ ವಿವಿಧ ರಾಜ್ಯಗಳ ಕಾಯ್ದೆಗಳ ಅಧ್ಯಯನ ನಡೆಸಲಾಗಿದ್ದು, ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಪರಿಣಿತರ ಜತೆ ಚರ್ಚೆ ನಡೆಸಲಾಗಿದೆ’ ಎಂದು ಹೇಳಿದ್ದಾರೆ.