‘ಅಕ್ರಮವಾಗಿ ದನದ ಮಾಂಸದ ಅಂಗಡಿಗಳು ಕಾರ್ಯ ನಿರ್ವಹಿಸುತ್ತಿದ್ದು, ಕೂಡಲೇ ತೆರವು ಮಾಡಬೇಕು’ ಎಂದು ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗ ದಳ ಮುಖಂಡರು ನಗರಸಭೆಗೆ ಈಚೆಗೆ ಮನವಿ ಸಲ್ಲಿಸಿದ್ದರು. ನಗರಸಭೆ ಪೌರಾಯುಕ್ತರು, ತೆರವುಗೊಳಿಸುವಂತೆ ಮೌಖಿಕವಾಗಿ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ್ದರು. ಈ ಸಂದರ್ಭದಲ್ಲೇ ಘಟನೆ ನಡೆದಿರುವುದು ಚರ್ಚೆಗೆ ಗ್ರಾಸವಾಗಿದೆ.