‘ಎಂ.ಪಿ.ರೇಣುಕಾಚಾರ್ಯ ಅವರು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯಾಗಲು, ಅವರು ಪ್ರತಿನಿಧಿಸುವ ಹೊನ್ನಾಳಿ ಕ್ಷೇತ್ರಕ್ಕೆ ₹1,000 ಕೋಟಿ ಅನುದಾನ ಸಿಗಲು ನನ್ನ ಶ್ರಮವೂ ಇದೆ. ಅದನ್ನು ಮರೆಯಬಾರದು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ವಿಧಾನಸಭೆಗೆ ಆಯ್ಕೆಯಾಗಿ ಬನ್ನಿ ಎಂದು ಅವರು ಸವಾಲು ಹಾಕಿದ್ದಾರೆ. ನಾನು ಸಚಿವನಾಗಿದ್ದಾಗಲೇ ರಾಜೀನಾಮೆ ಕೊಟ್ಟು ಚುನಾವಣೆ ಎದುರಿಸಿದ್ದೇನೆ. ನನ್ನ ಬಗ್ಗೆ 40 ಶಾಸಕರು ಹೈಕಮಾಂಡ್ಗೆ ದೂರು ನೀಡಿರುವ ಕುರಿತು ತಿಳಿದಿಲ್ಲ. ವರಿಷ್ಠರಿಗೆ ಏನು ಹೇಳಬೇಕೊ ಅದನ್ನು ಹೇಳಿಯಾಗಿದೆ. ಮುಂದೆ ಫಲಿತಾಂಶ ಪ್ರಕಟವಾಗಲಿದೆ’ ಎಂದರು.