ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು, ‘ಕೋರ್ಟ್ ಆದೇಶ ಪಾಲನೆಯ ವಸ್ತುಸ್ಥಿತಿ ವರದಿ ಸಲ್ಲಿಸಲು ಕಾಲಾವಕಾಶ ಬೇಕು’ ಎಂದು ಕೋರಿದರು. ಇದಕ್ಕೆ ವ್ಯಗ್ರವಾದ ನ್ಯಾಯಪೀಠ, ‘ವಸ್ತುಸ್ಥಿತಿ ವರದಿ ಸಲ್ಲಿಸಲು ಇದೇನು ನಾಪತ್ತೆ ಪ್ರಕರಣವೇ, ಒಳ್ಳೆಯ ಕೆಲಸ ಮಾಡಿದರೆ ಜನ ಮೆಚ್ಚಿ ವೋಟು ಹಾಕುತ್ತಾರೆ. ಕಡೇ ಪಕ್ಷ ಇದೊ ಒಂದು ವೋಟು ಗಿಟ್ಟಿಸುವ ಕಾರ್ಯಕ್ರಮ ಎಂದು ಸರ್ಕಾರ ಪರಿಗಣಿಸಬೇಕಿತ್ತು ’ ಎಂದು ಸರ್ಕಾರವನ್ನು ಕುಟುಕಿತು.