<p><strong>ಬೆಂಗಳೂರು:</strong> ಕೊರೊನಾ ರೋಗಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊಡಿಸಲು ₹ 1.20 ಲಕ್ಷ ಹಣ ಪಡೆದ ಮೂವರನ್ನು ಸದಾಶಿವನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವೆಂಕಟ ಸುಬ್ಬರಾವ್ (28), ಮಂಜುನಾಥ್ (31) ಹಾಗೂ ಮತ್ತೊಂದು ಆಸ್ಪತ್ರೆಯಲ್ಲಿ ‘ಆರೋಗ್ಯ ಮಿತ್ರ’ನಾಗಿ ಕೆಲಸ ಮಾಡುತ್ತಿದ್ದ ಪುನೀತ್ (31) ಬಂಧಿತರು.</p>.<p>‘ಕೊರೊನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ನೆಲಮಂಗಲದಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಅಲ್ಲಿ ಹಾಸಿಗೆ ಸಿಗದೆ ಪರದಾಡುತ್ತಿದ್ದರು. ಈ ವೇಳೆ ₹ 1.20 ಲಕ್ಷ ಹಣ ನೀಡಿದರೆ ಬೇರೆ ಆಸ್ಪತ್ರೆಯಲ್ಲಿ ಹಾಸಿಗೆ ಕೊಡಿಸುವುದಾಗಿ ಆರೋಪಿಗಳು ತಿಳಿಸಿದ್ದರು’.</p>.<p>‘ತುರ್ತಾಗಿ ಹಾಸಿಗೆ ಅಗತ್ಯ ಇದ್ದಿದ್ದರಿಂದ ಸೋಂಕಿತೆಯ ಮಗ ಲಕ್ಷ್ಮೀಶ ಎಂಬುವರು ಆರೋಪಿಗಳಿಗೆ ಗೂಗಲ್ ಪೇ ಮೂಲಕ ₹ 50 ಸಾವಿರ ಹಾಗೂ ₹ 70 ಸಾವಿರ ನಗದು ನೀಡಿದ್ದರು. ಇದಾದ ನಂತರ ಬೇರೆ ಆಸ್ಪತ್ರೆಯಲ್ಲಿ ರೋಗಿಗೆ ಹಾಸಿಗೆ ವ್ಯವಸ್ಥೆಯೂ ಆಯಿತು. ಆದರೆ, ಕೆಲವೇ ಗಂಟೆಗಳಲ್ಲಿ ರೋಗಿ ಮೃತಪಟ್ಟಿದ್ದರು’.</p>.<p>‘ಇದರಿಂದ ಮನನೊಂದ ಮೃತರ ಮಗ ಲಕ್ಷ್ಮೀಶ ಹಾಸಿಗೆಗಾಗಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಇದರ ಅನ್ವಯ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೊರೊನಾ ರೋಗಿಗೆ ಆಸ್ಪತ್ರೆಯಲ್ಲಿ ಹಾಸಿಗೆ ಕೊಡಿಸಲು ₹ 1.20 ಲಕ್ಷ ಹಣ ಪಡೆದ ಮೂವರನ್ನು ಸದಾಶಿವನಗರ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಖಾಸಗಿ ಆಸ್ಪತ್ರೆಯ ಸಿಬ್ಬಂದಿ ವೆಂಕಟ ಸುಬ್ಬರಾವ್ (28), ಮಂಜುನಾಥ್ (31) ಹಾಗೂ ಮತ್ತೊಂದು ಆಸ್ಪತ್ರೆಯಲ್ಲಿ ‘ಆರೋಗ್ಯ ಮಿತ್ರ’ನಾಗಿ ಕೆಲಸ ಮಾಡುತ್ತಿದ್ದ ಪುನೀತ್ (31) ಬಂಧಿತರು.</p>.<p>‘ಕೊರೊನಾ ಸೋಂಕಿತ ಮಹಿಳೆಯೊಬ್ಬರು ಚಿಕಿತ್ಸೆಗಾಗಿ ನೆಲಮಂಗಲದಿಂದ ಇಲ್ಲಿನ ಖಾಸಗಿ ಆಸ್ಪತ್ರೆಗೆ ಬಂದಿದ್ದರು. ಅಲ್ಲಿ ಹಾಸಿಗೆ ಸಿಗದೆ ಪರದಾಡುತ್ತಿದ್ದರು. ಈ ವೇಳೆ ₹ 1.20 ಲಕ್ಷ ಹಣ ನೀಡಿದರೆ ಬೇರೆ ಆಸ್ಪತ್ರೆಯಲ್ಲಿ ಹಾಸಿಗೆ ಕೊಡಿಸುವುದಾಗಿ ಆರೋಪಿಗಳು ತಿಳಿಸಿದ್ದರು’.</p>.<p>‘ತುರ್ತಾಗಿ ಹಾಸಿಗೆ ಅಗತ್ಯ ಇದ್ದಿದ್ದರಿಂದ ಸೋಂಕಿತೆಯ ಮಗ ಲಕ್ಷ್ಮೀಶ ಎಂಬುವರು ಆರೋಪಿಗಳಿಗೆ ಗೂಗಲ್ ಪೇ ಮೂಲಕ ₹ 50 ಸಾವಿರ ಹಾಗೂ ₹ 70 ಸಾವಿರ ನಗದು ನೀಡಿದ್ದರು. ಇದಾದ ನಂತರ ಬೇರೆ ಆಸ್ಪತ್ರೆಯಲ್ಲಿ ರೋಗಿಗೆ ಹಾಸಿಗೆ ವ್ಯವಸ್ಥೆಯೂ ಆಯಿತು. ಆದರೆ, ಕೆಲವೇ ಗಂಟೆಗಳಲ್ಲಿ ರೋಗಿ ಮೃತಪಟ್ಟಿದ್ದರು’.</p>.<p>‘ಇದರಿಂದ ಮನನೊಂದ ಮೃತರ ಮಗ ಲಕ್ಷ್ಮೀಶ ಹಾಸಿಗೆಗಾಗಿ ಆರೋಪಿಗಳು ಹಣಕ್ಕೆ ಬೇಡಿಕೆ ಇಟ್ಟಿರುವ ಕುರಿತು ಪೊಲೀಸರಿಗೆ ದೂರು ನೀಡಿದ್ದರು. ಇದರ ಅನ್ವಯ ಪೊಲೀಸರು ಮೂವರನ್ನೂ ಬಂಧಿಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>