<p>ಗದಗ: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ತಾಲ್ಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ಗಣೇಶ್ ಚಿಕ್ಕನಟ್ಟಿ (58) ಮೃತರು. ಕೊಲೆ ಮಾಡಿದ ಬಳಿಕ ಆರೋಪಿ ವಿಜಯ್ (24) ಪೊಲೀಸರಿಗೆ ಶರಣಾಗಿದ್ದಾನೆ.</p>.<p>‘ಮೃತ ಗಣೇಶ್ ಚಿಕ್ಕನಟ್ಟಿ ಪ್ರತಿದಿನ ಬೆಳಿಗ್ಗೆ ರಾತ್ರಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಇದರಿಂದ ಮನೆಯಲ್ಲಿ ದಿನಂಪ್ರತಿ ಜಗಳ ನಡೆಯುತ್ತಿತ್ತು. ಅವರ ಇಬ್ಬರು ಮಕ್ಕಳು ಕೂಡ ಮನೆ ಬಿಟ್ಟು ಹೋಗಿದ್ದರು. ಕುಡಿದು ಗಲಾಟೆ ಮಾಡುವುದರ ಜತೆಗೆ ಮನೆಯ ವಾಸ್ತು ಸರಿ ಇಲ್ಲ; ಮನೆ ಒಡೆದು ಹಾಕುವೆ ಎಂದು ಹೇಳುತ್ತಿದ್ದರು. ಬುಧವಾರ ನಡೆದ ಜಗಳದಲ್ಲಿ ವಿಜಯ್ ತಂದೆಯನ್ನು ಹತ್ಯೆ ಮಾಡಿದ್ದಾನೆ’ ಎಂದು ಗದಗ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ತಂದೆಯನ್ನು ಕೊಲೆ ಮಾಡಿದ ವಿಷಯವನ್ನು ವಿಜಯ್ ಊರಿನ ಕೆಲವರಿಗೆ ತಿಳಿಸಿದ್ದಾನೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಶರಣಾಗಿದ್ದಾನೆ’ ಎಂದು ಅವರು ತಿಳಿಸಿದರು.</p>.<p>ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ಹಾಗೂ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಕೌಟುಂಬಿಕ ಕಲಹದಿಂದ ಸಿಟ್ಟಿಗೆದ್ದ ಮಗನೇ ತಂದೆಯನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ತಾಲ್ಲೂಕಿನ ಹುಲಕೋಟಿ ಗ್ರಾಮದಲ್ಲಿ ನಡೆದಿದೆ.</p>.<p>ಗ್ರಾಮದ ಗಣೇಶ್ ಚಿಕ್ಕನಟ್ಟಿ (58) ಮೃತರು. ಕೊಲೆ ಮಾಡಿದ ಬಳಿಕ ಆರೋಪಿ ವಿಜಯ್ (24) ಪೊಲೀಸರಿಗೆ ಶರಣಾಗಿದ್ದಾನೆ.</p>.<p>‘ಮೃತ ಗಣೇಶ್ ಚಿಕ್ಕನಟ್ಟಿ ಪ್ರತಿದಿನ ಬೆಳಿಗ್ಗೆ ರಾತ್ರಿ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದರು. ಇದರಿಂದ ಮನೆಯಲ್ಲಿ ದಿನಂಪ್ರತಿ ಜಗಳ ನಡೆಯುತ್ತಿತ್ತು. ಅವರ ಇಬ್ಬರು ಮಕ್ಕಳು ಕೂಡ ಮನೆ ಬಿಟ್ಟು ಹೋಗಿದ್ದರು. ಕುಡಿದು ಗಲಾಟೆ ಮಾಡುವುದರ ಜತೆಗೆ ಮನೆಯ ವಾಸ್ತು ಸರಿ ಇಲ್ಲ; ಮನೆ ಒಡೆದು ಹಾಕುವೆ ಎಂದು ಹೇಳುತ್ತಿದ್ದರು. ಬುಧವಾರ ನಡೆದ ಜಗಳದಲ್ಲಿ ವಿಜಯ್ ತಂದೆಯನ್ನು ಹತ್ಯೆ ಮಾಡಿದ್ದಾನೆ’ ಎಂದು ಗದಗ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.</p>.<p>‘ತಂದೆಯನ್ನು ಕೊಲೆ ಮಾಡಿದ ವಿಷಯವನ್ನು ವಿಜಯ್ ಊರಿನ ಕೆಲವರಿಗೆ ತಿಳಿಸಿದ್ದಾನೆ. ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಆರೋಪಿ ಶರಣಾಗಿದ್ದಾನೆ’ ಎಂದು ಅವರು ತಿಳಿಸಿದರು.</p>.<p>ಗದಗ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು, ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ಹಾಗೂ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>