ಡಿಸ್ಟಿಲರಿಗಳ ಮೂಲಗಳ ಮೂಲಕ ಮದ್ಯಸಾರ ಉತ್ಪಾದನೆ ಮತ್ತು ಇಳುವರಿಗಳಲ್ಲಿ ವ್ಯತ್ಯಾಸವಾಗಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ಪ್ರತಿ ವರ್ಷ ನಷ್ಟವಾಗುತ್ತಿದೆ ಎಂದು ಈ ಹಿಂದೆ ಸಾರಾಯಿ ನಿಷೇಧ ಮಾಡಲಾಯಿತು. ಆ ಬಳಿಕ ಸಾರಾಯಿ ಮಾರಾಟಗಾರರಿಗೆ ಪುನರ್ವಸತಿ ಕಲ್ಪಿಸಲಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್,ಬಿ.ಕೆ.ಹರಿಪ್ರಸಾದ್ ಮತ್ತು ಇತರ ಸದಸ್ಯರು ಟೀಕಿಸಿದರು.