<p><strong>ಬೆಂಗಳೂರು: </strong>ರಾಜ್ಯದಲ್ಲಿ ಲಾಕ್ಡೌನ್ ಅವಧಿಯ ಆರಂಭದಲ್ಲಿ ಮದ್ಯದಂಗಡಿಗಳಲ್ಲಿ ಇದ್ದ ಮದ್ಯದ ಸ್ಟಾಕ್ ಮತ್ತು ಲಾಕ್ಡೌನ್ ಅಂತ್ಯದಲ್ಲಿ ಲಭ್ಯವಿದ್ದ ಸ್ಟಾಕ್ನಲ್ಲಿ ವ್ಯತ್ಯಾಸವಿದ್ದರೆ, ಅದನ್ನು ಕಳ್ಳತನದ ವ್ಯಾಪಾರ ಎಂದು ಪರಿಗಣಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶನ ನೀಡಿದೆ.</p>.<p>ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರಿಗೆ ಈ ಸಂಬಂಧ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಸೂಚನೆ ನೀಡಿದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಪಾಟೀಲರು, ‘ಲಾಕ್ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಸೇರಿದಂತೆ ಅನೇಕ ಅನಪೇಕ್ಷಣೀಯ ವ್ಯವಹಾರಗಳು ನಡೆದಿವೆ. ಮದ್ಯದಂಗಡಿಗಳನ್ನು ಅಧಿಕೃತವಾಗಿ ಆರಂಭಿಸುವವರೆಗೆ ನಡೆದಿರುವ ವ್ಯಾಪಾರ ಕಳ್ಳಮಾರ್ಗದಲ್ಲಿ ನಡೆದಿರುವಂತದ್ದಾಗಿದೆ ಎಂದು ಸಭೆಯಲ್ಲಿ ಎಲ್ಲ ಸದಸ್ಯರು ಅಭಿಪ್ರಾಯಪಟ್ಟರು’ ಎಂದು ಹೇಳಿದರು.</p>.<p>ಡಿಸ್ಟಿಲರಿಗಳ ಮೂಲಗಳ ಮೂಲಕ ಮದ್ಯಸಾರ ಉತ್ಪಾದನೆ ಮತ್ತು ಇಳುವರಿಗಳಲ್ಲಿ ವ್ಯತ್ಯಾಸವಾಗಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ಪ್ರತಿ ವರ್ಷ ನಷ್ಟವಾಗುತ್ತಿದೆ ಎಂದು ಈ ಹಿಂದೆ ಸಾರಾಯಿ ನಿಷೇಧ ಮಾಡಲಾಯಿತು. ಆ ಬಳಿಕ ಸಾರಾಯಿ ಮಾರಾಟಗಾರರಿಗೆ ಪುನರ್ವಸತಿ ಕಲ್ಪಿಸಲಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್,ಬಿ.ಕೆ.ಹರಿಪ್ರಸಾದ್ ಮತ್ತು ಇತರ ಸದಸ್ಯರು ಟೀಕಿಸಿದರು.</p>.<p>ಲಾಕ್ಡೌನ್ ಸಂದರ್ಭದ ಮದ್ಯ ವ್ಯಾಪಾರದ ಬಗ್ಗೆ ಅಬಕಾರಿ ಆಯುಕ್ತರು ಮತ್ತು ಅಧಿಕಾರಿಗಳು ಪೂರ್ಣ ಮಾಹಿತಿ ಒದಗಿಸದೇ ಇರುವ ಬಗ್ಗೆ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ರಾಜ್ಯದಲ್ಲಿ ಲಾಕ್ಡೌನ್ ಅವಧಿಯ ಆರಂಭದಲ್ಲಿ ಮದ್ಯದಂಗಡಿಗಳಲ್ಲಿ ಇದ್ದ ಮದ್ಯದ ಸ್ಟಾಕ್ ಮತ್ತು ಲಾಕ್ಡೌನ್ ಅಂತ್ಯದಲ್ಲಿ ಲಭ್ಯವಿದ್ದ ಸ್ಟಾಕ್ನಲ್ಲಿ ವ್ಯತ್ಯಾಸವಿದ್ದರೆ, ಅದನ್ನು ಕಳ್ಳತನದ ವ್ಯಾಪಾರ ಎಂದು ಪರಿಗಣಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶನ ನೀಡಿದೆ.</p>.<p>ಹಣಕಾಸು ಇಲಾಖೆ ಅಪರ ಮುಖ್ಯಕಾರ್ಯದರ್ಶಿಯವರಿಗೆ ಈ ಸಂಬಂಧ ಸಮಿತಿ ಅಧ್ಯಕ್ಷ ಎಚ್.ಕೆ.ಪಾಟೀಲ ಸೂಚನೆ ನೀಡಿದರು.</p>.<p>ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಪಾಟೀಲರು, ‘ಲಾಕ್ಡೌನ್ ಸಂದರ್ಭದಲ್ಲಿ ಮದ್ಯ ಮಾರಾಟ ಸೇರಿದಂತೆ ಅನೇಕ ಅನಪೇಕ್ಷಣೀಯ ವ್ಯವಹಾರಗಳು ನಡೆದಿವೆ. ಮದ್ಯದಂಗಡಿಗಳನ್ನು ಅಧಿಕೃತವಾಗಿ ಆರಂಭಿಸುವವರೆಗೆ ನಡೆದಿರುವ ವ್ಯಾಪಾರ ಕಳ್ಳಮಾರ್ಗದಲ್ಲಿ ನಡೆದಿರುವಂತದ್ದಾಗಿದೆ ಎಂದು ಸಭೆಯಲ್ಲಿ ಎಲ್ಲ ಸದಸ್ಯರು ಅಭಿಪ್ರಾಯಪಟ್ಟರು’ ಎಂದು ಹೇಳಿದರು.</p>.<p>ಡಿಸ್ಟಿಲರಿಗಳ ಮೂಲಗಳ ಮೂಲಕ ಮದ್ಯಸಾರ ಉತ್ಪಾದನೆ ಮತ್ತು ಇಳುವರಿಗಳಲ್ಲಿ ವ್ಯತ್ಯಾಸವಾಗಿ ಸರ್ಕಾರದ ಬೊಕ್ಕಸಕ್ಕೆ ಸಾವಿರಾರು ಕೋಟಿ ಪ್ರತಿ ವರ್ಷ ನಷ್ಟವಾಗುತ್ತಿದೆ ಎಂದು ಈ ಹಿಂದೆ ಸಾರಾಯಿ ನಿಷೇಧ ಮಾಡಲಾಯಿತು. ಆ ಬಳಿಕ ಸಾರಾಯಿ ಮಾರಾಟಗಾರರಿಗೆ ಪುನರ್ವಸತಿ ಕಲ್ಪಿಸಲಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಕಾಂಗ್ರೆಸ್ನ ಕೆ.ಆರ್.ರಮೇಶ್ ಕುಮಾರ್,ಬಿ.ಕೆ.ಹರಿಪ್ರಸಾದ್ ಮತ್ತು ಇತರ ಸದಸ್ಯರು ಟೀಕಿಸಿದರು.</p>.<p>ಲಾಕ್ಡೌನ್ ಸಂದರ್ಭದ ಮದ್ಯ ವ್ಯಾಪಾರದ ಬಗ್ಗೆ ಅಬಕಾರಿ ಆಯುಕ್ತರು ಮತ್ತು ಅಧಿಕಾರಿಗಳು ಪೂರ್ಣ ಮಾಹಿತಿ ಒದಗಿಸದೇ ಇರುವ ಬಗ್ಗೆ ಸಭೆಯಲ್ಲಿ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>