ಇಡೀ ದೇಶದಲ್ಲೇ ರಾಜ್ಯದ ಕಾರ್ಮಿಕ ಇಲಾಖೆ ಕ್ರಾಂತಿಕಾರಿ ಬದಲಾವಣೆ ತಂದಿದೆ. ಎರಡು ವರ್ಷಗಳಲ್ಲಿ ರಾಜ್ಯದ ಕಾರ್ಮಿಕರ ಮಕ್ಕಳಿಗೆ ₹845 ಕೋಟಿ ವಿದ್ಯಾರ್ಥಿವೇತನ ಪಾವತಿಸಲಾಗಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ 500 ಕಾರ್ಮಿಕರ ಮಕ್ಕಳನ್ನು ಕೆ.ಎ.ಎಸ್. ಹಾಗೂ 250 ಕಾರ್ಮಿಕರ ಮಕ್ಕಳನ್ನು ಐ.ಎ.ಎಸ್. ತರಬೇತಿಗೆ ನಿಯೋಜಿಸಲಾಗಿದೆ. ತರಬೇತಿ ಸಮಯದಲ್ಲಿ ₹6 ಸಾವಿರ ಸ್ಟೈಫಂಡ್ ನೀಡಲಾಗುತ್ತಿದೆ. ಕಾರ್ಮಿಕರ ಮಕ್ಕಳಿಗೆ ವಿದೇಶದಲ್ಲಿ ವ್ಯಾಸಂಗಕ್ಕೆ ಅವಕಾಶ ಕಲ್ಪಿಸಲಾಗಿದೆ ಹಾಗೂ ಸಂಪೂರ್ಣ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಹೇಳಿದರು.