‘18.02 ಲಕ್ಷ ರೈತರ ಬ್ಯಾಂಕ್ ಖಾತೆಗೆ ಈಗಾಗಲೇ ಒಟ್ಟು ₹ 1,252.89 ಕೋಟಿ ಇನ್ಪುಟ್ ಸಬ್ಸಿಡಿ ನೇರವಾಗಿ ಜಮೆ ಆಗಿದೆ. ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಇದೀಗ ಹೆಚ್ಚುವರಿ ಪರಿಹಾರ ಬಿಡುಗಡೆ ಮಾಡಲಾಗಿದೆ. ಆ ಮೂಲಕ, ರಾಜ್ಯದಲ್ಲಿ 2021ನೇ ಸಾಲಿನಲ್ಲಿ ಬಿದ್ದ ಅಕಾಲಿಕ ಮಳೆ, ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ರೈತರಿಗೆ ಈವರೆಗೆ ₹ 2,388.39 ಕೋಟಿ ಪರಿಹಾರ ನೀಡಿದಂತಾಗಿದೆ’ ಎಂದರು.