ಎಲ್ಲ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳಿಗೆ ಗುರುವಾರ ಟಿಪ್ಪಣಿ ರವಾನಿಸಿರುವ ಅವರು, ‘ಎಸ್.ಸಿ ಮತ್ತು ಎಸ್.ಟಿ ಸಮುದಾಯಗಳಿಗೆ ಹೆಚ್ಚಿಸಲಾಗಿರುವ ಮೀಸಲಾತಿ ಜಾರಿ ಗೊಳಿಸಲು ರೋಸ್ಟರ್ ಬಿಂದುಗಳನ್ನು ಗುರುತಿಸುವ ಪ್ರಕ್ರಿಯೆ ಚಾಲನೆಯಲ್ಲಿದೆ. ಇದು ಅಂತಿಮಗೊಂಡು, ಪ್ರಕಟಿಸುವವರೆಗೂ ಎಲ್ಲ ನೇರ ನೇಮಕಾತಿ ಪ್ರಕ್ರಿಯೆಗಳನ್ನು ತಡೆ ಹಿಡಿಯಬೇಕು. ಮೀಸಲಾತಿ ಅನ್ವಯವಾಗುವ ಹುದ್ದೆಗಳಿಗೆ ಬಡ್ತಿ ನೀಡಲು ಇಲಾಖಾ ಮುಂಬಡ್ತಿ ಸಮಿತಿ ಸಭೆ ಆಯೋಜಿಸಬಾರದು’ ಎಂದಿದ್ದಾರೆ.