<p><strong>ಬೆಂಗಳೂರು: </strong>ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಇತರೆ ಯಾವುದೇ ಸಮಗ್ರ ಶಿಕ್ಷಣ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಗರಿಷ್ಠ ₹7.5ಲಕ್ಷದವರೆಗೆ ಬಡ್ಡಿರಹಿತ ಸಾಲ ಸಿಗಲಿದೆ. ಈ ಸೌಲಭ್ಯ ಪಡೆಯಲು ಯಾವುದೇ ಪೂರಕ ಭದ್ರತೆ (ಕೊಲ್ಯಾಟರಲ್ ಸೆಕ್ಯುರಿಟಿ) ಒದಗಿಸಬೇಕಾದ ಅಗತ್ಯವೂ ಇಲ್ಲ. ಮೂರನೇ ವ್ಯಕ್ತಿಯ ಭದ್ರತೆ ಒದಗಿಸಬೇಕಾಗಿಯೂ ಇಲ್ಲ.</p>.<p>ಕೇಂದ್ರ ವಲಯದ ಬಡ್ಡಿ ಸಬ್ಸಿಡಿ ಯೋಜನೆ (ಸಿಎಸ್ಐಎಸ್) ಅಡಿ ಈ ಸೌಲಭ್ಯ ವಿದ್ಯಾರ್ಥಿಗಳಿಗೆ ದೊರೆಯಲಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಈ ಸಿಎಸ್ಐಎಸ್ ಯೋಜನೆಯನ್ನು ಪರಿಚಯಿಸಿದೆ. ಕುಟುಂಬದ ವಾರ್ಷಿಕ ಆದಾಯ ₹4.5 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ಸಾಲ ಪಡೆಯಬಹುದು.</p>.<p>ಈ ಮುನ್ನ, ನ್ಯಾಕ್, ಎನ್ಬಿಐ, ಸಿಎಫ್ಟಿಐ ಮಾನ್ಯತೆ ಹೊಂದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಸಿಎಸ್ಐಎಸ್ ಅಡಿ ಈ ಸೌಲಭ್ಯ ಸಿಗುತ್ತಿತ್ತು. ಅಲ್ಲದೆ, ಸಾಲ ತೆಗೆದುಕೊಳ್ಳಲು ಪೂರಕ ಭದ್ರತೆ ನೀಡಬೇಕಿತ್ತು. ಬಡ್ಡಿಯನ್ನೂ ವಿಧಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ಡಾ. ರಾಮಮನೋಹರ್ ಲೋಹಿಯಾ ಚಿಂತಕರ ವೇದಿಕೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಯೋಜನೆಯ ಪ್ರಯೋಜನವನ್ನು ಯಾವುದೇ ತಾರತಮ್ಯ ಇಲ್ಲದೆ ಎಲ್ಲ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು’ ಎಂದು ಡಿ.4ರಂದು ಆದೇಶಿಸಿದೆ.</p>.<p>‘ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ, ಯಾವುದೇ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಶೇ 90ರಷ್ಟು ಪೋಷಕರಿಗೆ ಈ ಬಗ್ಗೆ ಮಾಹಿತಿ ಇಲ್ಲ. ನ್ಯಾಯಾಲಯದ ಆದೇಶದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ವೇದಿಕೆಯ ಅಧ್ಯಕ್ಷ ಬಿ.ಎಸ್. ಶಿವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಸಿಎಸ್ಐಎಸ್ ಯೋಜನೆ<br />ಯಾರು ಅರ್ಹರು?: </strong>ಆರ್ಥಿಕವಾಗಿ ಹಿಂದುಳಿದಿರುವ, ಅಂದರೆ ಕುಟುಂಬದ ವಾರ್ಷಿಕ ಆದಾಯ ₹4.5ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು. ಕಾನೂನು, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಯಾವುದೇ ಕೋರ್ಸ್ ಮಾತ್ರವಲ್ಲದೆ, ಸಂಶೋಧನಾ ವಿದ್ಯಾರ್ಥಿಗಳೂ ಅರ್ಹರು.</p>.<p><strong>ಸೌಲಭ್ಯಗಳೇನು?: </strong>ಭದ್ರತೆ ಇಲ್ಲದೆ, ಬಡ್ಡಿರಹಿತವಾಗಿ ಗರಿಷ್ಠ ₹7.5 ಲಕ್ಷದವರೆಗೆ ಸಾಲ. ವಿದ್ಯಾರ್ಥಿಗಳ ವ್ಯಾಸಂಗ ಮಾಡುವ ಕೋರ್ಸ್ನ ಅವಧಿ ಮತ್ತು ನಂತರದ ಒಂದು ವರ್ಷ ಅವಧಿಗೆ ಕೇಂದ್ರ ಸರ್ಕಾರವೇ ಬಡ್ಡಿ ಪಾವತಿಸುತ್ತದೆ.</p>.<p><strong>ಅರ್ಜಿ ಸಲ್ಲಿಕೆ ಹೇಗೆ?</strong>: ಕೆನರಾ ಬ್ಯಾಂಕ್ ಈ ಯೋಜನೆಯ ನೋಡಲ್ ಬ್ಯಾಂಕ್. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕೋರ್ಸ್ಗೆ ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಪ್ರಾಧಿಕಾರ ಅಥವಾ ಮಂಡಳಿಗಳು ಈ ಅರ್ಜಿಯನ್ನು ಪುರಸ್ಕರಿಸಿ ಸಂಬಂಧಿಸಿದ ಬ್ಯಾಂಕ್ಗಳಿಗೆ ಅರ್ಜಿಗಳನ್ನು ರವಾನಿಸುತ್ತವೆ ಮತ್ತು ವಿದ್ಯಾರ್ಥಿಗಳಿಗೆ ಅನುಮೋದನೆ ಪತ್ರ ನೀಡುತ್ತವೆ.</p>.<p>ಉದಾಹರಣೆಗೆ, ಎಲ್ಎಲ್ಎಂ ವ್ಯಾಸಂಗ ಮಾಡುತ್ತಿರುವವರು ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ, ವೈದ್ಯಕೀಯ ಪದವಿ ಅಧ್ಯಯನ ಮಾಡುತ್ತಿರುವವರು ಭಾರತೀಯ ವೈದ್ಯಕೀಯ ಮಂಡಳಿಗೆ ಅರ್ಜಿ ಸಲ್ಲಿಸಿ, ಪ್ರಮಾಣಪತ್ರ ಪಡೆದು, ಕೆನರಾ ಬ್ಯಾಂಕಿನಲ್ಲಿ ಸಾಲಕ್ಕೆ ಅರ್ಜಿ ಕೊಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಇತರೆ ಯಾವುದೇ ಸಮಗ್ರ ಶಿಕ್ಷಣ ಕೋರ್ಸ್ಗಳ ವಿದ್ಯಾರ್ಥಿಗಳಿಗೆ ಗರಿಷ್ಠ ₹7.5ಲಕ್ಷದವರೆಗೆ ಬಡ್ಡಿರಹಿತ ಸಾಲ ಸಿಗಲಿದೆ. ಈ ಸೌಲಭ್ಯ ಪಡೆಯಲು ಯಾವುದೇ ಪೂರಕ ಭದ್ರತೆ (ಕೊಲ್ಯಾಟರಲ್ ಸೆಕ್ಯುರಿಟಿ) ಒದಗಿಸಬೇಕಾದ ಅಗತ್ಯವೂ ಇಲ್ಲ. ಮೂರನೇ ವ್ಯಕ್ತಿಯ ಭದ್ರತೆ ಒದಗಿಸಬೇಕಾಗಿಯೂ ಇಲ್ಲ.</p>.<p>ಕೇಂದ್ರ ವಲಯದ ಬಡ್ಡಿ ಸಬ್ಸಿಡಿ ಯೋಜನೆ (ಸಿಎಸ್ಐಎಸ್) ಅಡಿ ಈ ಸೌಲಭ್ಯ ವಿದ್ಯಾರ್ಥಿಗಳಿಗೆ ದೊರೆಯಲಿದೆ.ಕೇಂದ್ರ ಶಿಕ್ಷಣ ಸಚಿವಾಲಯ ಈ ಸಿಎಸ್ಐಎಸ್ ಯೋಜನೆಯನ್ನು ಪರಿಚಯಿಸಿದೆ. ಕುಟುಂಬದ ವಾರ್ಷಿಕ ಆದಾಯ ₹4.5 ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ಸಾಲ ಪಡೆಯಬಹುದು.</p>.<p>ಈ ಮುನ್ನ, ನ್ಯಾಕ್, ಎನ್ಬಿಐ, ಸಿಎಫ್ಟಿಐ ಮಾನ್ಯತೆ ಹೊಂದಿರುವ ಶಿಕ್ಷಣ ಸಂಸ್ಥೆಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಸಿಎಸ್ಐಎಸ್ ಅಡಿ ಈ ಸೌಲಭ್ಯ ಸಿಗುತ್ತಿತ್ತು. ಅಲ್ಲದೆ, ಸಾಲ ತೆಗೆದುಕೊಳ್ಳಲು ಪೂರಕ ಭದ್ರತೆ ನೀಡಬೇಕಿತ್ತು. ಬಡ್ಡಿಯನ್ನೂ ವಿಧಿಸಲಾಗುತ್ತಿತ್ತು. ಇದನ್ನು ಪ್ರಶ್ನಿಸಿ ಡಾ. ರಾಮಮನೋಹರ್ ಲೋಹಿಯಾ ಚಿಂತಕರ ವೇದಿಕೆ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.</p>.<p>ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ‘ಈ ಯೋಜನೆಯ ಪ್ರಯೋಜನವನ್ನು ಯಾವುದೇ ತಾರತಮ್ಯ ಇಲ್ಲದೆ ಎಲ್ಲ ವಿದ್ಯಾರ್ಥಿಗಳಿಗೆ ವಿಸ್ತರಿಸಬೇಕು’ ಎಂದು ಡಿ.4ರಂದು ಆದೇಶಿಸಿದೆ.</p>.<p>‘ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ, ಯಾವುದೇ ಕೋರ್ಸ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ವಿಸ್ತರಿಸುವಂತೆ ಕೇಂದ್ರ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಶೇ 90ರಷ್ಟು ಪೋಷಕರಿಗೆ ಈ ಬಗ್ಗೆ ಮಾಹಿತಿ ಇಲ್ಲ. ನ್ಯಾಯಾಲಯದ ಆದೇಶದಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ’ ಎಂದು ವೇದಿಕೆಯ ಅಧ್ಯಕ್ಷ ಬಿ.ಎಸ್. ಶಿವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p><strong>ಸಿಎಸ್ಐಎಸ್ ಯೋಜನೆ<br />ಯಾರು ಅರ್ಹರು?: </strong>ಆರ್ಥಿಕವಾಗಿ ಹಿಂದುಳಿದಿರುವ, ಅಂದರೆ ಕುಟುಂಬದ ವಾರ್ಷಿಕ ಆದಾಯ ₹4.5ಲಕ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು. ಕಾನೂನು, ಎಂಜಿನಿಯರಿಂಗ್, ನರ್ಸಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಸೇರಿದಂತೆ ಯಾವುದೇ ಕೋರ್ಸ್ ಮಾತ್ರವಲ್ಲದೆ, ಸಂಶೋಧನಾ ವಿದ್ಯಾರ್ಥಿಗಳೂ ಅರ್ಹರು.</p>.<p><strong>ಸೌಲಭ್ಯಗಳೇನು?: </strong>ಭದ್ರತೆ ಇಲ್ಲದೆ, ಬಡ್ಡಿರಹಿತವಾಗಿ ಗರಿಷ್ಠ ₹7.5 ಲಕ್ಷದವರೆಗೆ ಸಾಲ. ವಿದ್ಯಾರ್ಥಿಗಳ ವ್ಯಾಸಂಗ ಮಾಡುವ ಕೋರ್ಸ್ನ ಅವಧಿ ಮತ್ತು ನಂತರದ ಒಂದು ವರ್ಷ ಅವಧಿಗೆ ಕೇಂದ್ರ ಸರ್ಕಾರವೇ ಬಡ್ಡಿ ಪಾವತಿಸುತ್ತದೆ.</p>.<p><strong>ಅರ್ಜಿ ಸಲ್ಲಿಕೆ ಹೇಗೆ?</strong>: ಕೆನರಾ ಬ್ಯಾಂಕ್ ಈ ಯೋಜನೆಯ ನೋಡಲ್ ಬ್ಯಾಂಕ್. ವಿದ್ಯಾರ್ಥಿಗಳು ವ್ಯಾಸಂಗ ಮಾಡುವ ಕೋರ್ಸ್ಗೆ ಸಂಬಂಧಿಸಿದ ನಿಯಂತ್ರಣ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಪ್ರಾಧಿಕಾರ ಅಥವಾ ಮಂಡಳಿಗಳು ಈ ಅರ್ಜಿಯನ್ನು ಪುರಸ್ಕರಿಸಿ ಸಂಬಂಧಿಸಿದ ಬ್ಯಾಂಕ್ಗಳಿಗೆ ಅರ್ಜಿಗಳನ್ನು ರವಾನಿಸುತ್ತವೆ ಮತ್ತು ವಿದ್ಯಾರ್ಥಿಗಳಿಗೆ ಅನುಮೋದನೆ ಪತ್ರ ನೀಡುತ್ತವೆ.</p>.<p>ಉದಾಹರಣೆಗೆ, ಎಲ್ಎಲ್ಎಂ ವ್ಯಾಸಂಗ ಮಾಡುತ್ತಿರುವವರು ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ, ವೈದ್ಯಕೀಯ ಪದವಿ ಅಧ್ಯಯನ ಮಾಡುತ್ತಿರುವವರು ಭಾರತೀಯ ವೈದ್ಯಕೀಯ ಮಂಡಳಿಗೆ ಅರ್ಜಿ ಸಲ್ಲಿಸಿ, ಪ್ರಮಾಣಪತ್ರ ಪಡೆದು, ಕೆನರಾ ಬ್ಯಾಂಕಿನಲ್ಲಿ ಸಾಲಕ್ಕೆ ಅರ್ಜಿ ಕೊಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>