ಬಿಜೆಪಿ ಚುನಾವಣಾ ಪ್ರಚಾರ ಕಾರ್ಯಾಲಯ ಉದ್ಘಾಟಿಸಿದ ಅವರು, ‘ನಾಲ್ಕು ಬಾರಿ ಮುಖ್ಯಮಂತ್ರಿ, ಎರಡು ಬಾರಿ ಪ್ರಧಾನಿಯಾದ ನರೇಂದ್ರ ಮೋದಿ ಅವರನ್ನು ಹೆಬ್ಬೆಟ್ಟಿನ ಪ್ರಧಾನಿ ಎನ್ನುತ್ತಾರೆ. ಜನಾದೇಶ ಯಾತ್ರೆಯನ್ನು ‘ಜನ ಬರ್ಬಾದ್ ಯಾತ್ರೆ’ ಎಂದು ಲೇವಡಿ ಮಾಡುತ್ತಿದ್ದಾರೆ. ಅವರ ಈ ಟೀಕೆ ಪ್ರಜಾಪ್ರಭುತ್ವಕ್ಕೆ ಮಾಡುತ್ತಿರುವ ಅವಮಾನ’ ಎಂದು ಆಕ್ರೋಶ ವ್ಯಕ್ತಪಡಿಸಿದರು.