<p><strong>ಬೆಂಗಳೂರು:</strong> ‘2020ರ ಒಳಗೆ ರೈತರ ಆದಾಯವು ದ್ವಿಗುಣವಾದಲ್ಲಿ ಅವರಿಗೆ ಯಾವ ರೀತಿಯ ಅನ್ಯಾಯವಾಗುತ್ತದೆ ಎಂದು ಹೋರಾಟಗಾರರು ಮತ್ತು ಚಿಂತಕರು ತಿಳಿಸಿಕೊಡಬಹುದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.</p>.<p>ರಂಗಕರ್ಮಿ ಪ್ರಸನ್ನ ಅವರನ್ನು ಉದ್ದೇಶಿಸಿಬಹಿರಂಗ ಪತ್ರ ಬರೆದಿರುವ ಅವರು, ಕೃಷಿಮಸೂದೆ ವಿರೋಧಿಸುತ್ತಿರುವ ಯಾರು ಬೇಕಾದರೂ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಕೋರಿದ್ದಾರೆ.</p>.<p>‘ಪಂಜಾಬ್ ಮತ್ತು ಹರಿಯಾಣದಲ್ಲಿ ತಪ್ಪು ಗ್ರಹಿಕೆಗೆ ಒಳಗಾದ ಕೆಲ ರೈತರು ದೆಹಲಿಯಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಇಲ್ಲಿ ಸ್ಥಳೀಯವಾಗಿ ಕೆಲವರು ಹೋರಾಟ ಮಾಡುತ್ತಿದ್ದಾರೆ. ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುವುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿದೆ. ಯಾವುದೇ ರೈತಪರ ಕಾಳಜಿ ಹೋರಾಟಗಾರರಲ್ಲಿ ಕಾಣಿಸುತ್ತಿಲ್ಲ. ಪ್ರಸನ್ನ ಅವರು ಯಾವ ಕಾರಣಕ್ಕೆ ಹೋರಾಟ ನಡೆಸುತ್ತಿದ್ದಾರೆ ಎಂಬುದು ಇನ್ನೂ ಸರಿಯಾಗಿ ಅರ್ಥವಾಗಿಲ್ಲ. ಅವರ ಕೆಲ ನಡೆಗಳು ಸಂಶಯವನ್ನು ಹುಟ್ಟುಹಾಕುತ್ತಿವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘2020ರ ಒಳಗೆ ರೈತರ ಆದಾಯವು ದ್ವಿಗುಣವಾದಲ್ಲಿ ಅವರಿಗೆ ಯಾವ ರೀತಿಯ ಅನ್ಯಾಯವಾಗುತ್ತದೆ ಎಂದು ಹೋರಾಟಗಾರರು ಮತ್ತು ಚಿಂತಕರು ತಿಳಿಸಿಕೊಡಬಹುದೆ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಪ್ರಶ್ನಿಸಿದ್ದಾರೆ.</p>.<p>ರಂಗಕರ್ಮಿ ಪ್ರಸನ್ನ ಅವರನ್ನು ಉದ್ದೇಶಿಸಿಬಹಿರಂಗ ಪತ್ರ ಬರೆದಿರುವ ಅವರು, ಕೃಷಿಮಸೂದೆ ವಿರೋಧಿಸುತ್ತಿರುವ ಯಾರು ಬೇಕಾದರೂ ತಮ್ಮ ಪ್ರಶ್ನೆಗಳಿಗೆ ಉತ್ತರಿಸುವಂತೆ ಕೋರಿದ್ದಾರೆ.</p>.<p>‘ಪಂಜಾಬ್ ಮತ್ತು ಹರಿಯಾಣದಲ್ಲಿ ತಪ್ಪು ಗ್ರಹಿಕೆಗೆ ಒಳಗಾದ ಕೆಲ ರೈತರು ದೆಹಲಿಯಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಇಲ್ಲಿ ಸ್ಥಳೀಯವಾಗಿ ಕೆಲವರು ಹೋರಾಟ ಮಾಡುತ್ತಿದ್ದಾರೆ. ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುವುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿದೆ. ಯಾವುದೇ ರೈತಪರ ಕಾಳಜಿ ಹೋರಾಟಗಾರರಲ್ಲಿ ಕಾಣಿಸುತ್ತಿಲ್ಲ. ಪ್ರಸನ್ನ ಅವರು ಯಾವ ಕಾರಣಕ್ಕೆ ಹೋರಾಟ ನಡೆಸುತ್ತಿದ್ದಾರೆ ಎಂಬುದು ಇನ್ನೂ ಸರಿಯಾಗಿ ಅರ್ಥವಾಗಿಲ್ಲ. ಅವರ ಕೆಲ ನಡೆಗಳು ಸಂಶಯವನ್ನು ಹುಟ್ಟುಹಾಕುತ್ತಿವೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>