‘ಪಂಜಾಬ್ ಮತ್ತು ಹರಿಯಾಣದಲ್ಲಿ ತಪ್ಪು ಗ್ರಹಿಕೆಗೆ ಒಳಗಾದ ಕೆಲ ರೈತರು ದೆಹಲಿಯಲ್ಲಿ ಮುಷ್ಕರ ನಡೆಸುತ್ತಿದ್ದಾರೆ. ಇಲ್ಲಿ ಸ್ಥಳೀಯವಾಗಿ ಕೆಲವರು ಹೋರಾಟ ಮಾಡುತ್ತಿದ್ದಾರೆ. ಮೋದಿ ಮತ್ತು ಬಿಜೆಪಿಯನ್ನು ವಿರೋಧಿಸುವುದು ಅವರ ಹೋರಾಟದ ಮುಖ್ಯ ಉದ್ದೇಶವಾಗಿದೆ. ಯಾವುದೇ ರೈತಪರ ಕಾಳಜಿ ಹೋರಾಟಗಾರರಲ್ಲಿ ಕಾಣಿಸುತ್ತಿಲ್ಲ. ಪ್ರಸನ್ನ ಅವರು ಯಾವ ಕಾರಣಕ್ಕೆ ಹೋರಾಟ ನಡೆಸುತ್ತಿದ್ದಾರೆ ಎಂಬುದು ಇನ್ನೂ ಸರಿಯಾಗಿ ಅರ್ಥವಾಗಿಲ್ಲ. ಅವರ ಕೆಲ ನಡೆಗಳು ಸಂಶಯವನ್ನು ಹುಟ್ಟುಹಾಕುತ್ತಿವೆ’ ಎಂದು ತಿಳಿಸಿದ್ದಾರೆ.