ದೊಡ್ಡಬಳ್ಳಾಪುರದಲ್ಲಿ ನಡೆದ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಕೆರೆಗಳೆಲ್ಲಾ ತುಂಬಿ, ಕೋಡಿ ಬಿದ್ದು, ಗಂಗಾದೇವಿಗೆ ಪೂಜೆ ಮಾಡುತ್ತೇವೆ. ಆದರೆ, ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದ ಅವಧಿಯಲ್ಲಿ ಕೆರೆಗಳು ತುಂಬಿರಲಿಲ್ಲ’ ಎಂದು ಸಿ.ಟಿ.ರವಿ ವಾಗ್ದಾಳಿ ನಡೆಸಿದರು.