<p><strong>ಕಲಬುರ್ಗಿ: </strong>ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ವಿಧಿಸಿರುವ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರುಮಂಗಳವಾರ ರಾತ್ರಿ ನಗರದಲ್ಲಿಜನಾಶೀರ್ವಾದ ಯಾತ್ರೆಯ ಸಭಾ ಕಾರ್ಯಕ್ರಮ ನಡೆಸಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಚಿವರು ತಡವಾಗಿ ಬಂದಿದ್ದರಿಂದ ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಯಿತು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಅವರು ತಮ್ಮ ಭಾಷಣದಲ್ಲಿ ಕರ್ಫ್ಯೂ ಆರಂಭವಾಗುವುದರೊಳಗಾಗಿ ಕಾರ್ಯಕ್ರಮ ಮುಗಿಸಬೇಕುಎಂದು ತಿಳಿಸಿದರು. ಆದರೆ, ಸಚಿವ ಖೂಬಾ ಅವರ ಭಾಷಣ ರಾತ್ರಿ 9.25ಕ್ಕೆ ಆರಂಭವಾಯಿತು. 9.49ಕ್ಕೆ ಕಾರ್ಯಕ್ರಮ ಮುಗಿಯಿತು.</p>.<p class="Subhead">ನೋಟಿಸ್: ಯಾತ್ರೆಗೆ ಅನುಮತಿ ನೀಡಿರಲಿಲ್ಲ. ಸಂಘಟಕರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ವಿಧಿಸಿರುವ ರಾತ್ರಿ ಕರ್ಫ್ಯೂ ಉಲ್ಲಂಘಿಸಿ ಕೇಂದ್ರ ಸಚಿವ ಭಗವಂತ ಖೂಬಾ ಅವರುಮಂಗಳವಾರ ರಾತ್ರಿ ನಗರದಲ್ಲಿಜನಾಶೀರ್ವಾದ ಯಾತ್ರೆಯ ಸಭಾ ಕಾರ್ಯಕ್ರಮ ನಡೆಸಿದರು.</p>.<p>ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಮಧ್ಯಾಹ್ನ 3.30ಕ್ಕೆ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಸಚಿವರು ತಡವಾಗಿ ಬಂದಿದ್ದರಿಂದ ರಾತ್ರಿ 8.30ಕ್ಕೆ ಸಭಾ ಕಾರ್ಯಕ್ರಮ ಆರಂಭವಾಯಿತು.</p>.<p>ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಮಾಲೀಕಯ್ಯ ಗುತ್ತೇದಾರ ಅವರು ತಮ್ಮ ಭಾಷಣದಲ್ಲಿ ಕರ್ಫ್ಯೂ ಆರಂಭವಾಗುವುದರೊಳಗಾಗಿ ಕಾರ್ಯಕ್ರಮ ಮುಗಿಸಬೇಕುಎಂದು ತಿಳಿಸಿದರು. ಆದರೆ, ಸಚಿವ ಖೂಬಾ ಅವರ ಭಾಷಣ ರಾತ್ರಿ 9.25ಕ್ಕೆ ಆರಂಭವಾಯಿತು. 9.49ಕ್ಕೆ ಕಾರ್ಯಕ್ರಮ ಮುಗಿಯಿತು.</p>.<p class="Subhead">ನೋಟಿಸ್: ಯಾತ್ರೆಗೆ ಅನುಮತಿ ನೀಡಿರಲಿಲ್ಲ. ಸಂಘಟಕರಿಗೆ ನೋಟಿಸ್ ಜಾರಿಗೊಳಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>