<p><strong>ಬೆಂಗಳೂರು:</strong> ಮೇ 4 ರವರೆಗಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಬಂದ್ನಿಂದ ಕೊರೊನಾಸೋಂಕಿನ ಸರಪಳಿಯನ್ನು ಮುರಿಯಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ಹೇಳಿದ್ದಾರೆ.</p>.<p>ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕಿನ ಸರಪಳಿ ಮುರಿಯುವಲ್ಲಿ ಯಶಸ್ವಿ ಆಗಬೇಕಿದ್ದರೆ, ಸಾರ್ವಜನಿಕರ ಸಹಕಾರ ಅಗತ್ಯ. ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ವೇಗವಾಗಿ ಹರಡುತ್ತಿರುವ ಸೋಂಕನ್ನು ತಡೆಗಟ್ಟಲು ತಾಂತ್ರಿಕ ಸಲಹಾ ಸಮಿತಿ ತಜ್ಞರು ವೈಜ್ಞಾನಿಕ ಆಧಾರದ ಮೇಲೆ ನೀಡಿರುವ ಸಲಹೆಯ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದನ್ನು ಪಾಲಿಸಲೇಬೇಕು. ಇದರಿಂದ ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತದೆ ಎಂದರು.</p>.<p>ಸೋಂಕಿಗೆ ಒಳಗಾದರೆ ಗಾಬರಿ ಆಗಬೇಕಾಗಿಲ್ಲ. ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು. ಎಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಾಗಿಯೂ ಇಲ್ಲ. ಯಾರು ಆಸ್ಪತ್ರೆಗೆ ದಾಖಲಾಗಬೇಕು ಎಂಬುದನ್ನು ತಿಳಿಸಲಾಗುವುದು. ಅಂತಹವರು ಮಾತ್ರ ದಾಖಲಾದರೆ ಸಾಕು ಎಂದು ತಿಳಿಸಿದರು.</p>.<p>ಬೆಂಗಳೂರು ನಗರದ ಎಂಟು ವಲಯಗಳಲ್ಲಿ ಕೋವಿಡ್ ಹೆಚ್ಚಿರುವ ಕಾರಣ ಉಸ್ತುವಾರಿ ಸಚಿವರು ಈ ವಲಯಗಳ ಮೇಲುಸ್ತುವಾರಿ ವಹಿಸಿದ್ದಾರೆ. ಮೃತರ ದಹನಕ್ಕಾಗಿ ಗೋಮಾಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಭೇಟಿ ಕೋಡುತ್ತೇನೆ. ನಾಳೆ ಮೈಸೂರಿಗೆ ತೆರಳುತ್ತೇನೆ ಎಂದು ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮೇ 4 ರವರೆಗಿನ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಬಂದ್ನಿಂದ ಕೊರೊನಾಸೋಂಕಿನ ಸರಪಳಿಯನ್ನು ಮುರಿಯಲು ಸಾಧ್ಯ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ.ಕೆ.ಸುಧಾಕರ್ ಹೇಳಿದ್ದಾರೆ.</p>.<p>ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಂಕಿನ ಸರಪಳಿ ಮುರಿಯುವಲ್ಲಿ ಯಶಸ್ವಿ ಆಗಬೇಕಿದ್ದರೆ, ಸಾರ್ವಜನಿಕರ ಸಹಕಾರ ಅಗತ್ಯ. ಸರ್ಕಾರ ಪ್ರಕಟಿಸಿರುವ ಮಾರ್ಗಸೂಚಿಗಳನ್ನು ಚಾಚೂತಪ್ಪದೆ ಪಾಲಿಸಬೇಕು ಎಂದು ಮನವಿ ಮಾಡಿದರು.</p>.<p>ವೇಗವಾಗಿ ಹರಡುತ್ತಿರುವ ಸೋಂಕನ್ನು ತಡೆಗಟ್ಟಲು ತಾಂತ್ರಿಕ ಸಲಹಾ ಸಮಿತಿ ತಜ್ಞರು ವೈಜ್ಞಾನಿಕ ಆಧಾರದ ಮೇಲೆ ನೀಡಿರುವ ಸಲಹೆಯ ಮೇರೆಗೆ ಮಾರ್ಗಸೂಚಿ ರೂಪಿಸಲಾಗಿದೆ. ಆದ್ದರಿಂದ ಸಾರ್ವಜನಿಕರು ಇದನ್ನು ಪಾಲಿಸಲೇಬೇಕು. ಇದರಿಂದ ಮುಂದಿನ ಮೂರು–ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತದೆ ಎಂದರು.</p>.<p>ಸೋಂಕಿಗೆ ಒಳಗಾದರೆ ಗಾಬರಿ ಆಗಬೇಕಾಗಿಲ್ಲ. ವೈದ್ಯರು ನೀಡುವ ಸಲಹೆ ಸೂಚನೆಗಳನ್ನು ಪಾಲಿಸಬೇಕು. ಎಲ್ಲರೂ ಆಸ್ಪತ್ರೆಗೆ ದಾಖಲಾಗಬೇಕಾಗಿಯೂ ಇಲ್ಲ. ಯಾರು ಆಸ್ಪತ್ರೆಗೆ ದಾಖಲಾಗಬೇಕು ಎಂಬುದನ್ನು ತಿಳಿಸಲಾಗುವುದು. ಅಂತಹವರು ಮಾತ್ರ ದಾಖಲಾದರೆ ಸಾಕು ಎಂದು ತಿಳಿಸಿದರು.</p>.<p>ಬೆಂಗಳೂರು ನಗರದ ಎಂಟು ವಲಯಗಳಲ್ಲಿ ಕೋವಿಡ್ ಹೆಚ್ಚಿರುವ ಕಾರಣ ಉಸ್ತುವಾರಿ ಸಚಿವರು ಈ ವಲಯಗಳ ಮೇಲುಸ್ತುವಾರಿ ವಹಿಸಿದ್ದಾರೆ. ಮೃತರ ದಹನಕ್ಕಾಗಿ ಗೋಮಾಳಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ಸೋಂಕು ಹೆಚ್ಚು ಇರುವ ಜಿಲ್ಲೆಗಳಿಗೆ ಭೇಟಿ ಕೋಡುತ್ತೇನೆ. ನಾಳೆ ಮೈಸೂರಿಗೆ ತೆರಳುತ್ತೇನೆ ಎಂದು ಸುಧಾಕರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>