‘ಎರಡು ತಿಂಗಳ ಹಿಂದೆ ರಾಜೀನಾಮೆ ನಿರ್ಧಾರ ಮಾಡಿದ್ದೆ’ ಎಂದು ಹೇಳಿದ ಯಡಿಯೂರಪ್ಪ, ಮಠಾಧೀಶರ ಗುಂಪನ್ನು ಸೇರಿಸಿ ಬಲಪ್ರದರ್ಶನ ಮಾಡುತ್ತಿರುವುದು ಏಕೆ? 25ರಂದೇ ಸಂದೇಶ ಬರುವುದಾದರೆ ಮಠಾಧೀಶರು ಸ್ವಯಂ ಪ್ರೇರಣೆಯಿಂದ ಸಮಾವೇಶ ಆಯೋಜಿಸಿದ್ದಾರೆಯೇ? ಹೀಗೆ ಮಾಡುವ ಮೂಲಕ ತಮ್ಮನ್ನು ಕೆಳಗಿಳಿಸಿದರೆ ಲಿಂಗಾಯತರು ತಿರುಗಿಬೀಳುವುದು ಖಚಿತ ಎಂಬ ಸಂದೇಶ ರವಾನಿಸುವುದು ಯಡಿಯೂರಪ್ಪ ಉದ್ದೇಶವೇ? ತಮ್ಮ ಮಗ ಬಿ.ವೈ.ವಿಜಯೇಂದ್ರಗೆ ರಾಜಕೀಯ ಭವಿಷ್ಯ ಕಲ್ಪಿಸುವುದರ ಜತೆಗೆ, ತಾವು ಹೇಳಿದವರನ್ನೇ ಮುಖ್ಯಮಂತ್ರಿ ಮಾಡಿಸಿ, ಅಧಿಕಾರದ ಅಂಕೆ ತಮ್ಮ ಕೈಯಲ್ಲೇ ಇರುವಂತೆ ನೋಡಿಕೊಳ್ಳುವ ಅಂದಾಜು ಇದ್ದಂತಿದೆ ಎಂಬ ವಿಶ್ಲೇಷಣೆ ಪಕ್ಷದೊಳಗೆ ನಡೆದಿದೆ.