<p><strong>ಮೈಸೂರು:</strong> ‘ಕಾಂಗೊ ದೇಶದ ಪ್ರಜೆಯೊಬ್ಬರು ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಗೆ ಪ್ರತೀಕಾರವಾಗಿ ಆ ದೇಶದಲ್ಲಿ ಭಾರತೀಯರ ಮೇಲೆ ಹಲ್ಲೆ ನಡೆಸುತ್ತಿದ್ದು, ಹಲವು ಅಂಗಡಿಗಳನ್ನು ಕೊಳ್ಳೆ ಹೊಡೆಯಲಾಗಿದೆ’ ಎಂದು ಕಾಂಗೊ ದೇಶದ ರಾಜಧಾನಿ ಕಿನ್ಶಾಸದಲ್ಲಿ ನೆಲೆಸಿರುವ ಮೈಸೂರು ಜಿಲ್ಲೆ, ಎಚ್.ಡಿ.ಕೋಟೆ ತಾಲ್ಲೂಕಿನ ವಿಜಯ್ ದೂರಿದ್ದಾರೆ.</p>.<p>‘ಕಾಂಗೊ ಪ್ರಜೆ ಮೃತರಾದ ಸುದ್ದಿ ಸಾಮಾಜಿಕ ಮಾಧ್ಯಮಗಳು, ಸುದ್ದಿವಾಹಿನಿಗಳಲ್ಲಿ ಹರಡಿದ ಬೆನ್ನಲ್ಲೇ ಭಾರತೀಯರನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಐದು ದಿನಗಳಿಂದ ಮನೆಯಿಂದ ಹೊರಗೆ ಇಳಿದಿಲ್ಲ. ಆತಂಕದಿಂದಲೇ ದಿನ ದೂಡುತ್ತಿ ದ್ದೇವೆ’ ಎಂದು ಭಾನುವಾರ ದೂರ ವಾಣಿ ಮೂಲಕ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಂದೂವರೆ ವರ್ಷದಿಂದ ಕುಟುಂಬ ಸಮೇತ ಇಲ್ಲಿ ನೆಲೆಸಿದ್ದೇವೆ. ಎಚ್.ಡಿ.ಕೋಟೆ ತಾಲ್ಲೂಕಿನ ಹಕ್ಕಿಪಿಕ್ಕಿ ಜನಾಂಗದ 20 ಮಂದಿ ಇಲ್ಲಿದ್ದೇವೆ. ಈ ನಗರದಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸೂಪರ್ ಮಾರ್ಕೆಟ್ ಒಳಗೊಂಡಂತೆ ಹಲವು ಅಂಗಡಿಗಳನ್ನು ಲೂಟಿ ಮಾಡಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ಹಿಂಸೆಯಿಂದಾಗಿ ನಗರದ ಕೆಲವೆಡೆ ಬಂದ್ನಂತಹ ವಾತಾವರಣವಿದೆ. ಭಾರತೀಯರು ನೆಲೆಸಿರುವ ಕಡೆಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸ ಲಾಗಿದೆ’ ಎಂದು ಹೇಳಿದರು.</p>.<p>ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದ ಕಾಂಗೊದ ಜೋಯೆಲ್ ಶಿಂದನಿ ಮಲು (27) ಎಂಬುವರು ಆ.2 ರಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ‘ಜೋಯೆಲ್ ಸಾವಿಗೆ ಪೊಲೀಸರೇ ಕಾರಣ’ ಎಂದು ಆರೋಪಿಸಿ ಆಫ್ರಿಕಾ ಪ್ರಜೆಗಳು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಕಾಂಗೊ ದೇಶದ ಪ್ರಜೆಯೊಬ್ಬರು ಬೆಂಗಳೂರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆಗೆ ಪ್ರತೀಕಾರವಾಗಿ ಆ ದೇಶದಲ್ಲಿ ಭಾರತೀಯರ ಮೇಲೆ ಹಲ್ಲೆ ನಡೆಸುತ್ತಿದ್ದು, ಹಲವು ಅಂಗಡಿಗಳನ್ನು ಕೊಳ್ಳೆ ಹೊಡೆಯಲಾಗಿದೆ’ ಎಂದು ಕಾಂಗೊ ದೇಶದ ರಾಜಧಾನಿ ಕಿನ್ಶಾಸದಲ್ಲಿ ನೆಲೆಸಿರುವ ಮೈಸೂರು ಜಿಲ್ಲೆ, ಎಚ್.ಡಿ.ಕೋಟೆ ತಾಲ್ಲೂಕಿನ ವಿಜಯ್ ದೂರಿದ್ದಾರೆ.</p>.<p>‘ಕಾಂಗೊ ಪ್ರಜೆ ಮೃತರಾದ ಸುದ್ದಿ ಸಾಮಾಜಿಕ ಮಾಧ್ಯಮಗಳು, ಸುದ್ದಿವಾಹಿನಿಗಳಲ್ಲಿ ಹರಡಿದ ಬೆನ್ನಲ್ಲೇ ಭಾರತೀಯರನ್ನು ಗುರಿಯಾಗಿಸಿ ದಾಳಿ ನಡೆಯುತ್ತಿದೆ. ಐದು ದಿನಗಳಿಂದ ಮನೆಯಿಂದ ಹೊರಗೆ ಇಳಿದಿಲ್ಲ. ಆತಂಕದಿಂದಲೇ ದಿನ ದೂಡುತ್ತಿ ದ್ದೇವೆ’ ಎಂದು ಭಾನುವಾರ ದೂರ ವಾಣಿ ಮೂಲಕ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಒಂದೂವರೆ ವರ್ಷದಿಂದ ಕುಟುಂಬ ಸಮೇತ ಇಲ್ಲಿ ನೆಲೆಸಿದ್ದೇವೆ. ಎಚ್.ಡಿ.ಕೋಟೆ ತಾಲ್ಲೂಕಿನ ಹಕ್ಕಿಪಿಕ್ಕಿ ಜನಾಂಗದ 20 ಮಂದಿ ಇಲ್ಲಿದ್ದೇವೆ. ಈ ನಗರದಲ್ಲಿ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸೂಪರ್ ಮಾರ್ಕೆಟ್ ಒಳಗೊಂಡಂತೆ ಹಲವು ಅಂಗಡಿಗಳನ್ನು ಲೂಟಿ ಮಾಡಲಾಗಿದೆ’ ಎಂದು ಅವರು ತಿಳಿಸಿದರು.</p>.<p>‘ಹಿಂಸೆಯಿಂದಾಗಿ ನಗರದ ಕೆಲವೆಡೆ ಬಂದ್ನಂತಹ ವಾತಾವರಣವಿದೆ. ಭಾರತೀಯರು ನೆಲೆಸಿರುವ ಕಡೆಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸ ಲಾಗಿದೆ’ ಎಂದು ಹೇಳಿದರು.</p>.<p>ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದ ಕಾಂಗೊದ ಜೋಯೆಲ್ ಶಿಂದನಿ ಮಲು (27) ಎಂಬುವರು ಆ.2 ರಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ‘ಜೋಯೆಲ್ ಸಾವಿಗೆ ಪೊಲೀಸರೇ ಕಾರಣ’ ಎಂದು ಆರೋಪಿಸಿ ಆಫ್ರಿಕಾ ಪ್ರಜೆಗಳು ಪ್ರತಿಭಟನೆ ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>