ಬೆಂಗಳೂರು: ’ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯ್ದೆ-2015ರ ಅಡಿ ಮಕ್ಕಳನ್ನು ಪೋಷಕರು, ಮಕ್ಕಳ ಕಲ್ಯಾಣ ಸಮಿತಿಗೆ (ಸಿಡಬ್ಲುಸಿ) ಒಪ್ಪಿಸಿದ ಪ್ರಕರಣಗಳಲ್ಲಿ ತನಿಖೆ ಮತ್ತು ಕೌನ್ಸೆಲಿಂಗ್ ನಡೆಸಲು ಅನುಸರಿಸಬೇಕಾದ ವಿಧಾನ ಗಳ ಕುರಿತಾದ ನಿಯಮಗಳನ್ನು ಶೀಘ್ರ ವೇ ಅಂತಿಮಗೊಳಿಸಿ ಗೆಜೆಟ್ನಲ್ಲಿ ಪ್ರಕಟಿಸಿ’ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.