ಈ ಯೋಜನೆಯನ್ನು ಗುಜರಾತ್ಗೆ ಸ್ಥಳಾಂತರಿಸಿದರೆ ಅದು ಒಕ್ಕೂಟ ವ್ಯವಸ್ಥೆಗೆ ಬಗೆಯುವ ದ್ರೋಹ. ಇಂತಹ ಪ್ರಕ್ರಿಯೆ ಕನ್ನಡಿಗರ ಸ್ವಾಭಿಮಾನ ಮತ್ತು ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಆದ್ದರಿಂದ, ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಸ್ಥಳಾಂತರಿಸುವ ಪ್ರಸ್ತಾವ ಕೈಬಿಡಬೇಕು. ನಗರದಿಂದಲೇ ಯೋಜನೆ ಕಾರ್ಯರೂಪಕ್ಕೆ ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.