‘ಸಚವ ಅಶ್ವತ್ಥ ನಾರಾಯಣ ತಮ್ಮ ಸ್ವಯಂ ರಕ್ಷಣೆಗಾಗಿ ಎಂ.ಬಿ. ಪಾಟೀಲ ಅವರನ್ನು ಭೇಟಿಮಾಡಿದ್ದಾರೆ’ ಎಂದು ಶಿವಕುಮಾರ್ ಹೇಳಿಕೆ ನೀಡಿದ್ದರು. ಅಶ್ವತ್ಥ ನಾರಾಯಣ ಮತ್ತು ಪಾಟೀಲ ಇಬ್ಬರೂ ಭೇಟಿಯನ್ನು ನಿರಾಕರಿಸಿದ್ದರು. ಶಿವಕುಮಾರ್ ಹೇಳಿಕೆ ಕುರಿತು ಪಾಟೀಲ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುವುದಾಗಿಯೂ ಹೇಳಿದ್ದರು.