‘ಮೃತ ಗುತ್ತಿಗೆದಾರ ಕೆಲವು ದಿನಗಳ ಹಿಂದೆ ನನ್ನ ಜತೆ ದೂರವಾಣಿ ಮೂಲಕ ಮಾತನಾಡಿದ್ದರು. ಈಶ್ವರಪ್ಪ ಅವರ ಪುತ್ರನಿಗೆ ಒಂದಷ್ಟು ಹಣ ನೀಡಿದ್ದು, ಇನ್ನೂ ಹೆಚ್ಚಿನ ಮೊತ್ತಕ್ಕೆ ಬೇಡಿಕೆ ಇಡುತ್ತಿದ್ದಾರೆ ಎಂಬ ವಿಷಯ ತಿಳಿಸಿದ್ದರು. ಸಂತೋಷ್ ಪಾಟೀಲ ಸಚಿವರ ವಿರುದ್ಧ ಆರೋಪ ಮಾಡಿರುವ ಕುರಿತು ಮಾರ್ಚ್ 11ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಕ್ರಮಕ್ಕೆ ಒತ್ತಾಯಿಸಿದ್ದೆ. ಅವರು ಪ್ರತಿಕ್ರಿಯೆಯನ್ನೇ ನೀಡಿರಲಿಲ್ಲ’ ಎಂದು ಹೇಳಿದರು.