ನಿಂಬಾಳ್ಕರ್ ಸೇರಿದಂತೆ ಐಎಂಎ ಹಗರಣದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ಧ ಆರೋಪಪಟ್ಟಿ ಸಲ್ಲಿಸಲು ಅನುಮತಿ ಕೋರಿ ಸಿಬಿಐ ಅಧಿಕಾರಿಗಳು 2019ರ ಡಿಸೆಂಬರ್ನಲ್ಲಿ ಪತ್ರ ಬರೆದಿದ್ದರು. ಆದರೆ, 2020ರ ಸೆಪ್ಟೆಂಬರ್ ತಿಂಗಳಿನಲ್ಲಿ ಅನುಮತಿ ನೀಡಲಾಗಿದೆ. ಆರೋಪಿತರ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆಯೂ ಸಿಬಿಐ ಶಿಫಾರಸು ಮಾಡಿತ್ತು. ಕೆಳಹಂತದ ಅಧಿಕಾರಿಗಳ ಅಮಾನತ್ತಿಗೆ ಕ್ರಮ ಜರುಗಿಸಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಹೇಮಂತ್ ನಿಂಬಾಳ್ಕರ್ ಅಮಾನತಿಗೆ ಈವರೆಗೂ ಪ್ರಸ್ತಾವವನ್ನೇ ಸಲ್ಲಿಸಿಲ್ಲ ಎಂದು ಆರೋಪಿಸಿದ್ದಾರೆ.