‘ಶಾಸಕ, ಸಚಿವನಾಗಿ ಕೆಲಸ ಮಾಡಿರುವುದರಿಂದ ನಿತ್ಯ ನೂರಾರು ಜನರು ದೂರವಾಣಿಯಲ್ಲಿ ಸಂಪರ್ಕಿಸುತ್ತಾರೆ. ಅವರ ಗುರುತು ಇಟ್ಟುಕೊಳ್ಳುವುದು ಕಷ್ಟ. ಆದರೆ, ಸ್ವತಃ ನಾನು ಯಾರೊಬ್ಬರನ್ನೂ ಸಂಪರ್ಕಿಸಿಲ್ಲ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಆಪ್ತವಾಗಿರುವ ಕಾರಣಕ್ಕೆ ಇಂತಹ ಪ್ರಕರಣದಲ್ಲಿ ಸಿಲುಕಿಸುವುದು ತಪ್ಪು’ ಎಂದರು.