ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2022–23ನೇ ಸಾಲಿನ ಬಾಬಾಸಾಹೇಬ್ ಅಂಬೇಡ್ಕರ್ ದತ್ತಿ ಪ್ರಶಸ್ತಿಗೆ ಪತ್ರಕರ್ತ ಡಿ.ಉಮಾಪತಿ ಆಯ್ಕೆಯಾಗಿದ್ದಾರೆ.
‘ಪ್ರಶಸ್ತಿಯು ₹10 ಸಾವಿರ ನಗದು ಮತ್ತು ಫಲಕ ಒಳಗೊಂಡಿದೆ. ಬಾಗಲಕೋಟೆಯ ಪತ್ರಕರ್ತ ಸುಭಾಷ್ ಹೊದ್ಲೂರು ಅವರು ಅಂಬೇಡ್ಕರ್ ಹೆಸರಿನಲ್ಲಿ ವಾರ್ಷಿಕ ಪ್ರಶಸ್ತಿಗೆ ದತ್ತಿನಿಧಿ ಸ್ಥಾಪಿಸಿದ್ದು, 2021-22ನೇ ಸಾಲಿನಿಂದ ನೀಡಲಾಗುತ್ತಿದೆ’ ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.