ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.5ರೊಳಗೆ ಮೂರು ಹತ್ಯೆಯ ಆರೋಪಿಗಳನ್ನು ಬಂಧಿಸದಿದ್ದರೆ ಸತ್ಯಾಗ್ರಹ: ಕುಮಾರಸ್ವಾಮಿ

Last Updated 1 ಆಗಸ್ಟ್ 2022, 11:18 IST
ಅಕ್ಷರ ಗಾತ್ರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆಗಸ್ಟ್ 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು‌.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ. ಈ ಜಿಲ್ಲೆಯಲ್ಲಿ ಪುನಃ ಶಾಂತಿ ಸ್ಥಾಪನೆ ಆಗಬೇಕು' ಎಂದರು.

'ಮುಖ್ಯಮಂತ್ರಿ ಜಿಲ್ಲೆಗೆ ಏನು ಸಾಧನೆ ಮಾಡಿದರು? ಆತಂಕದಲ್ಲಿದ್ದ ಜನರಲ್ಲಿ ಮುಖ್ಯಮಂತ್ರಿ ವಿಶ್ವಾಸ ಮೂಡಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಯಾರನ್ನು ಮೆಚ್ಚಿಸಲು ಇವರು ಸಿಎಂ ಆಗಿದ್ದಾರೆ' ಎಂದು ಪ್ರಶ್ನಿಸಿದರು.

ಸುರತ್ಕಲ್‌ನಲ್ಲಿ ಗುರುವಾರ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಪಾಝಿಲ್ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಆತನೀಡಿದ ಮಾಹಿತಿ ಆಧಾರದಲ್ಲಿ ಹಂತಕರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

ಬಂಧಿತ ಆರೋಪಿಯನ್ನು ಕೃತ್ಯಕ್ಕೆ ಬಳಕೆಯಾದ ಹ್ಯುಂಡೈ ಇಯಾನ್‌ ಕಾರಿನ ಮಾಲೀಕ ಅಜಿತ್ ಕ್ರಾಸ್ತ ಎಂದು ಗುರುತಿಸಲಾಗಿದೆ. ಆರೋಪಿಯ ಬಂಧನವನ್ನು ರಾಜ್ಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ 'ಪ್ರಜಾವಾಣಿ'ಗೆ ಖಚಿತಪಡಿಸಿದ್ದಾರೆ.

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT