ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಗಮೋಹನ ದಾಸ್, ನೀಲಾಗೆ ‘ದರೈಸ್ತ್ರೀ’ ಪ್ರಶಸ್ತಿ

Last Updated 19 ಫೆಬ್ರುವರಿ 2021, 22:02 IST
ಅಕ್ಷರ ಗಾತ್ರ

ತುಮಕೂರು: ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನ ದಾಸ್, ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಅವರನ್ನು ‘ದರೈಸ್ತ್ರೀ’ (ದಲಿತ, ರೈತ, ಸ್ತ್ರೀ) ಪ್ರಶಸ್ತಿಗೆ ಹಾಗೂ ಲೇಖಕ ವಿಲ್ಸನ್ ಕಟೀಲ್ ಅವರನ್ನು ‘ಕೆ.ಬಿ ಕಾವ್ಯ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಈ ಮೂರು ಪ್ರಶಸ್ತಿಗಳು ‌‌ತಲಾ ₹ 10 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿವೆ. ಕವಿ ದಿವಂಗತ ಕೆ.ಬಿ. ಸಿದ್ದಯ್ಯ ಈ ಪ್ರಶಸ್ತಿ ಸ್ಥಾಪಿಸಿದ್ದು, ‘ದರೈಸ್ತ್ರೀ’ ಟ್ರಸ್ಟ್ ಮೂಲಕ ಪ್ರತಿವರ್ಷ ಮಾರ್ಚ್‌ನಲ್ಲಿ ಪ್ರದಾನ ಮಾಡಲಾಗುತ್ತದೆ. ಮಾರ್ಚ್‌ 7ರಂದು ನಗರದ ಬಾಲಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡುವರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT