ಅದರಂತೆ ಪೊಲೀಸರು ಕೂಡಲೇ ವಿಶೇಷ ತಂಡವನ್ನು ರಚಿಸಿ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರತಿಪಕ್ಷಗಳು ಸಾವಿನ ಪ್ರಕರಣವನ್ನು ಸಹ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವುದು ದುರದೃಷ್ಟಕರ. ನಾವು ನೊಂದ ಕುಟುಂಬಗಳಿಗೆ ನ್ಯಾಯ ಒದಗಿಸಿ , ಕಾನೂನು ಪ್ರಕಾರವೇ ಆರೋಪಿಗಳಿಗೆ ಶಿಕ್ಷೆಯಾಗಲು ಪ್ರಯತ್ನಿಸುತ್ತಿದ್ದೇವೆ. ಆದರೆ ಕೆಲವರು ಇದರಲ್ಲೂ ಲಾಭನಷ್ಟದ ಲೆಕ್ಕಾಚಾರ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.